ಉಡುಪಿ : ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಭೇಟಿ ನೀಡಿ ವೈಯಕ್ತಿಕ 1 ಲಕ್ಷ ರೂ. ಸಹಾಯ ನೀಡಿದ ಯಶ್ಪಾಲ್ ಸುವರ್ಣ – vishwanews24
ಉಡುಪಿ : ಅನೂಪ್ ಕನಸು ನನಸಾಗಿಸಲು ಒಟ್ಟಾಗಿ ಪ್ರಯತ್ನ ಮಾಡುತ್ತೇವೆ: ಯಶ್ಪಾಲ್ ಸುವರ್ಣ
ಉಡುಪಿ : ಯು.ಟಿ ಖಾದರ್ ಭೇಟಿಯ ಬಳಿಕ ಹುತಾತ್ಮ ಯೋಧ ಅನೂಪ್ ಪೂಜಾರಿ ಅವರ ಪತ್ನಿ ಹಾಗೂ ಕುಟುಂಬಿಕರನ್ನು ಭೇಟಿ ಮಾಡಿ ಸಾಂತ್ವಾನ ತಿಳಿಸಿದ ಉಡುಪಿ ಶಾಸಕ ಯಶಪಾಲ್ ಸುವರ್ಣ ತಮ್ಮ ವಯಕ್ತಿಕ 1 ಲಕ್ಷ ರೂ. ಚೆಕ್ ನೀಡಿ ಅನೂಪ್ ಅವರ ಪುತ್ರಿ ಇಶಾನಿ ಅವರ ಹೆಸರಿನಲ್ಲಿ ನಿಖರ ಠೇವಣೆ ಇಡುವಂತೆ ಹೇಳಿದರು.
ಬಳಿಕ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಅನೂಪ್ ಅವರ ನಿಧನ ಕರಾವಳಿಯ ಜನರಿಗೆ ಅತೀವ ದುಃಖವನ್ನು ತಂದಿದೆ. ಸೈನ್ಯಕ್ಕೆ ಸೇರುವ ಯುವಕರಿಗೆ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಅಕಾಡೆಮಿಯೊಂದನ್ನು ಹುಟ್ಟುಹಾಕಬೇಕು ಎನ್ನುವ ಕನಸುಗಳು ಅನೂಪ್ ಪೂಜಾರಿ ಅವರಿಗಿತ್ತು ಎನ್ನುವುದನ್ನು ಸ್ಥಳೀಯರು ತಿಳಿಸಿದ್ದಾರೆ. ಅವರ ಕನಸನ್ನು ನನಸು ಮಾಡಲು ಯಾವುದೇ ಸಲಹೆ ಹಾಗೂ ಸಹಕಾರಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಒಟ್ಟಾಗಿ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಸುರತ್ಕಲ್ : ಸಿಲಿಂಡರ್ ಸ್ಫೋಟ ಪ್ರಕರಣ ; ಚಿಕಿತ್ಸೆ ಫಲಿಸದೆ ಮತ್ತೋರ್ವ ಮಹಿಳೆಯ ಸಾವು – vishwanews24
ಸ್ಥಳಿಯ ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿ.ಹಿರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ್ ಶೆಟ್ಟಿ, ಅಶೋಕ ಪೂಜಾರಿ ಬೀಜಾಡಿ, ಪ್ರಕಾಶ್ ಪೂಜಾರಿ ಬೀಜಾಡಿ, ಅವಿನಾಶ್ ಉಳ್ತೂರು, ಶೇಖರ ಚಾತ್ರಬೆಟ್ಟು, ಸದಾನಂದ ಶೆಟ್ಟಿ ಕೆದೂರು, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಸುರೇಂದ್ರ ಶೆಟ್ಟಿ ಸಹನಾ, ಯಾಸಿನ್ ಹೆಮ್ಮಾಡಿ, ಅನಿಲ್ ಚಾತ್ರಬೆಟ್ಟು, ಜಸಿಂತಾ ಡಿಮೆಲ್ಲೋ, ಎನ್ಎಸ್ಯುಐ ಮುಖಂಡ ಸಯ್ಯದ್ ಫುರ್ಖಾನ್ ಮುಂತಾದವರಿದ್ದರು.
