ಉಡುಪಿ : ಹೈಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು : ಜಿಲ್ಲಾಧಿಕಾರಿ – Vishwanews24

Featured, ಉಡುಪಿ

ಉಡುಪಿ : ಹೈಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು : ಜಿಲ್ಲಾಧಿಕಾರಿ – Vishwanews24

ಮಾ.21ರ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿ..

ಉಡುಪಿ: ಹಿಜಾಬ್ ಪ್ರಕರಣದ ಕುರಿತು ಮಂಗಳವಾರ ಹೈಕೋರ್ಟ್ ತೀರ್ಪು ನೀಡಿದ್ದು, ಇಂದಿನಿಂದ ಎಂದಿನಂತೆ ಶಾಲಾ- ಕಾಲೇಜು ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಎಂ ಕೂರ್ಮಾ ರಾವ್ ಅವರು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ” ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಂಗಳವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಎಲ್ಲಾ ತರಗತಿಗಳು ಯಾವುದೇ ಗೊಂದಲಗಳಿಲ್ಲ ಎಂದಿನಂತೆ ಆರಂಭವಾಗಿದೆ. ಹೈಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕಾನೂನು ಕ್ರಮ ತೆಗೆದುಕೊಂಡಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮತ್ತು ಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ನಾವು ವಿನಂತಿಸುತ್ತೇವೆ.

“ಸದ್ಯ ಶೇಕಡಾವಾರು ಹಾಜರಾತಿ ಶೇ.91 ಇದ್ದು, ಪರೀಕ್ಷೆಗೆ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಬಗ್ಗೆ ಗಮನಹರಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನು ಜಿಲ್ಲೆಯಲ್ಲಿ ಮಾ.21ರ ಸಂಜೆ 6 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ಅನ್ವಯ ನಿಷೇದಾಜ್ಞೆ ಜಾರಿಯಲ್ಲಿದೆ.

ಉಡುಪಿ: ಸಂವಿಧಾನದ ಎದುರು ಯಾವುದೇ ಧರ್ಮ ಮುಖ್ಯವಲ್ಲ : ಯಶ್‌ಪಾಲ್ ಸುವರ್ಣ – Vishwanews24

Leave a Reply