ಉಪ್ಪಿನಂಗಡಿ :ಮುಸ್ಲಿಂ ಮನೆಯಲ್ಲಿ ಹಿಂದೂ ಯುವತಿಯನ್ನು ಅಕ್ರಮವಾಗಿ ಕೂಡಿಹಾಕಿದ ಆರೋಪ; ಪೊಲೀಸರಿಂದ ಪರಿಶೀಲನೆ – Vishwanews24

Featured, ದಕ್ಷಿಣ ಕನ್ನಡ

ಉಪ್ಪಿನಂಗಡಿ :ಮುಸ್ಲಿಂ ಮನೆಯಲ್ಲಿ ಹಿಂದೂ ಯುವತಿಯನ್ನು ಅಕ್ರಮವಾಗಿ ಕೂಡಿಹಾಕಿದ ಆರೋಪ; ಪೊಲೀಸರಿಂದ ಪರಿಶೀಲನೆ..

ತಾನು ಸ್ವ ಇಚ್ಚೆಯಿಂದ ನನ್ನ ಗೆಳತಿ ಮನೆಗೆ ಬಂದಿರುವುದಾಗಿ ಯುವತಿ ಹೇಳಿಕೆ..

ಉಪ್ಪಿನಂಗಡಿ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಮುಸ್ಲಿಮ್‌ ಸಮುದಾಯದ ಮನೆಯಲ್ಲಿ ಹಿಂದೂ ಯುವತಿಯನ್ನು ಅಕ್ರಮವಾಗಿ ಕೂಡಿ ಹಾಕಲಾಗಿದೆ ಎಂಬ ಮಾಹಿತಿಯಿಂದಾಗಿ ಮಂಗಳವಾರ ತಡ ರಾತ್ರಿ ಪೊಲೀಸ್‌ ಕಾರ್ಯಾಚರಣೆ ನಡೆಸಿ ಯುವತಿಯನ್ನು ವಶಕ್ಕೆ ಪಡೆದು ಆಕೆಯ ಪೋಷಕರ ಮನೆಗೆ ಕಳುಹಿಸಿಕೊಟ್ಟ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.

ಇದನ್ನೂ ಓದಿ :

ಪ್ರಧಾನಿ ಸೈನಿಕರನ್ನು ಭೇಟಿ ಮಾಡುವಾಗ ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ : ಪಿಎಂ ಕಚೇರಿಗೆ ನೋಟೀಸ್- Vishwanews24

ಹಿಂದೂ ಯುವತಿಯೊಬ್ಬಳು ಪಿಲಿಗೂಡಿನ ಸಂಶುದ್ದೀನ್‌ ಎಂಬಾತನ ಮನೆಯಲ್ಲಿ ಅಕ್ರಮ ವಶದಲ್ಲಿದ್ದಾಳೆ ಎಂಬ ಮಾಹಿತಿಯನ್ನು ಸ್ಥಳೀಯ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಠಾಣಾ ಪೊಲೀಸರು ರಾತ್ರಿ ಕಾರ್ಯಾಚರಣೆ ನಡೆಸಿ ಆಕೆಯನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದಾಗ, ತಾನು ಸ್ವ ಇಚ್ಚೆಯಿಂದ ನನ್ನ ಗೆಳತಿ ಮನೆಗೆ ಬಂದಿರುವುದಾಗಿ ತಿಳಿಸಿದ ಕಾರಣಕ್ಕೆ ಆಕೆಯಿಂದ ಹೇಳಿಕೆ ಪಡೆದು ಆಕೆಯ ಹೆತ್ತವರ ಮನೆಗೆ ಕಳುಹಿಸಿಕೊಡಲಾಗಿತ್ತು. ಯುವತಿ ಮೂಲತಃ ಚಿಕ್ಕಮಗಳೂರು ಭಾಗದವಳು ಎಂದು ತಿಳಿದು ಬಂದಿದೆ.

ಈ ವಿದ್ಯಮಾನದ ಬೆನ್ನಿಗೆಯೇ ಸಂಶುದ್ದೀನ್‌ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ರಕ್ಷಿತ್‌, ಯಶೋಧರ, ಕಾರ್ತಿಕ್‌, ಹರೀಶ್‌ , ಬಾಬು, ದೇವರಾಜ್‌ ಮತ್ತಿತರರು ತನ್ನ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ತನ್ನಲ್ಲಿ ಹಾಗೂ ತನ್ನ ದೊಡ್ಡಮ್ಮನಲ್ಲಿ ನಿಮ್ಮ ಮನೆಯಲ್ಲಿ ಯಾರಾದರೂ ಹಿಂದೂ ಯುವತಿ ಇದ್ದಾರೆಯಾ ಎಂದು ಪ್ರಶ್ನಿಸಿದ್ದು, ತಾನು ತನ್ನ ಪತ್ನಿಯ ಗೆಳತಿಯಾದ ಸುಷ್ಮಾ ಆಲಿಯಾಸ್‌ ಆಯಿಷಾಳು ಮನೆಯಲ್ಲಿ ಇರುವುದನ್ನು ತಿಳಿಸಿದಾಗ ತಮಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರಿನನ್ವಯ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ :

ಉಡುಪಿ: ಹಿಜಾಬ್ ವಿವಾದ :ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ಜಿಲ್ಲಾಡಳಿತಕ್ಕೆ ಸೂಚನೆ – Vishwanews24

Leave a Reply