ಉಳ್ಳಾಲ : ಗುಳಿಗ ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು -Vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ : ಗುಳಿಗ ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು -Vishwanews24

ಉಳ್ಳಾಲ ( Vishwanews24 ): ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬ್ಲಪದವಿನಲ್ಲಿ ನಡೆದಿದೆ.ಮುಚ್ಚಿರಕಲ್ಲು ಗುಳಿಗ ಸಾನಿಧ್ಯದಲ್ಲಿ ಸೋಮವಾರ ತಡರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ.

ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ.ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭಾರತದ ಮುಖ್ಯ ನ್ಯಾಯಾಧೀಶರಾಗಿ ಜಸ್ಟಿಸ್ ಎನ್. ವಿ. ರಮಣ ನೇಮಕ -Vishwanews24