ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೇ ಮುಂದಿನ ಪ್ರಧಾನಿಯಾಗಬೇಕು : ಡಿ.ಕೆ.ಶಿವಕುಮಾರ್
ಬೆಂಗಳೂರು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೇ ಪ್ರಧಾನಿ ಆಗಬೇಕು ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರಧಾನಿ ಅಭ್ಯರ್ಥಿ ರೇಸ್ನಿಂದ ರಾಹುಲ್ ಗಾಂಧಿ ಹಿಂದೆ ಸರಿದ ವಿಚಾರದ ಬಗ್ಗೆ ಮಾತನಾಡಿರುವ ಅವರು, ರಾಹುಲ್ ಗಾಂಧಿ ಪ್ರಧಾನಿ ಆಗುವುದರ ಬಗ್ಗೆ ನಮ್ಮ ಪಕ್ಷ ತೀರ್ಮಾನ ಮಾಡುತ್ತದೆ. ದೇಶದ ಹಿತದೃಷ್ಟಿಯಿಂದ ಆ ಮನೆತನ ಯಾವಾಗಲೂ ತ್ಯಾಗ ಮಾಡುತ್ತಾ ಬಂದಿದೆ ಎಂದರು. ಬಿಜೆಪಿ ಸೋಲಿಸುವ ಸಲುವಾಗಿ ಎಲ್ಲರೂ ಒಂದಾಗಬೇಕು ಅಂತ ಹೇಳಿದ್ದಾರೆ. ಪ್ರಧಾನಿ ಅಭ್ಯರ್ಥಿ ರೇಸ್ನಿಂದ ರಾಹುಲ್ ಗಾಂಧಿ ಹಿಂದೆ ಸರಿದಿರಬಹುದು. ಆದ್ರೆ, ಅವರು ನಮ್ಮ ನಾಯಕರು ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಿತ್ರ ಪಕ್ಷಕ್ಕೆ ಪ್ರಧಾನಿ ಸ್ಥಾನವನ್ನು ರಾಹುಲ್ ಗಾಂಧಿ ಬಿಟ್ಟುಕೊಟ್ಟಿರಬಹುದು. ಆದ್ರೆ ರಾಹುಲ್ ಗಾಂಧಿ ಅವರೇ ನಮ್ಮ ನಾಯಕರು. ಅವರೇ ಕಾಂಗ್ರೆಸ್ ಮುಂದಿನ ಪ್ರಧಾನಿ ಆಗ್ಬೇಕು. ಯುಪಿಎ ಸರ್ಕಾರ ಇದ್ದಾಗಲೇ ಪಿಎಂ ಆಗಬಹುದಿತ್ತು. ಆದ್ರೆ ಸೋನಿಯಾ ಮತ್ತು ರಾಹುಲ್ ಗಾಂಧಿ ಇಬ್ಬರು ತ್ಯಾಗ ಮಾಡಿದ್ದಾರೆ. ಚುನಾವಣೆ ಗೆಲ್ಲುವುದೇ ನಮ್ಮ ಗುರಿ ಎಂದು ತಿಳಿಸಿದರು..
ಸೋನಿಯಾ ಗಾಂಧಿ ಅವರು ಯಾವತ್ತೋ ಪ್ರಧಾನಿ ಅಗಬಹುದಿತ್ತು. ರಾಹುಲ್ ಗಾಂಧಿಯವರೂ ಪ್ರಧಾನಿಯಾಗಬೇಕಿತ್ತು. ಆದರೆ ವ್ಯಕ್ತಿಗಿಂತ ದೇಶ ಮುಖ್ಯ ಎನ್ನುವುದನ್ನು ರಾಹುಲ್ ಪ್ರತಿಪಾದನೆ ಮಾಡುತ್ತಾ ಬಂದಿದ್ದಾರೆ. ರಾಷ್ಟ್ರಧ್ವಜ ನನ್ನ ಧರ್ಮ ಎಂದು ಹೇಳಿದವರು ರಾಹುಲ್ ಗಾಂಧಿ, ಈ ಹಿನ್ನೆಲೆಯಲ್ಲಿ ಅವರು ನಾನು ಪ್ರಧಾನಿಯಾಗಬೇಕೆಂದು ಎಲ್ಲೂ ಹೇಳಿಕೆ ನೀಡಿಲ್ಲ ಎಂದರು.
