ಎಚ್.ಡಿ ಕುಮಾರಸ್ವಾಮಿ ಅವರೇ ನನ್ನನ್ನು ಬಿಜೆಪಿ ಜೊತೆ ಕಳುಹಿಸಿದ್ದಾರೆ : ಜಿಟಿ ದೇವೇಗೌಡ -Vishwanews24
ಮೈಸೂರು:ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೇ ನನ್ನನ್ನು ದಸರಾ ಮಾಡಲು ಬಿಜೆಪಿ ಜೊತೆ ಕಳುಹಿಸಿದ್ದಾರೆ ಎಂದು ಜಿಟಿ ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಲೋಕಸಭಾ ಚುನಾವಣೆಗೂ ಬಿಜೆಪಿ ಜೊತೆ ಕುಮಾರಸ್ವಾಮಿ ಅವರೇ ಕಳುಹಿಸಿದ್ದು, ಅವರು ನೀಡಿದ ಕೆಲಸವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಈಗಲೂ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.
ಈ ವೇಳೆ ಜಿಟಿಡಿ ನಮ್ಮ ಹಿರಿಯ ನಾಯಕರು ಅವರನ್ನು ಬಿಟ್ಟರೆ ಅವರ ಮಗ ಜಿ.ಡಿ ಹರೀಶ್ ಚುನಾವಣೆಗೆ ನಿಲ್ಲುಸುತ್ತೇವೆ ಎಂಬ ಸಾರಾ ಮಹೇಶ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹರೀಶ್ ಮೇಲೆ ಪ್ರೀತಿ ಇದ್ದರೆ ಸಾ.ರಾ ಮಹೇಶ್ ಅವರೇ ನೇರವಾಗಿ ಅವನ ಜೊತೆ ಮಾತನಾಡಲಿ ಎಂದು ಹೇಳಿದ್ದಾರೆ.
