ಎರಡನೇ ಪಟ್ಟಿ ಇಂದೇ ಬಿಡುಗಡೆ – ಜಗದೀಶ್ ಶೆಟ್ಟರ್​ಗೆ ಪಕ್ಷ ಟಿಕೆಟ್ ಸಿಗುವುದು ಖಚಿತ : ಬಿ.ಎಸ್​​.ಯಡಿಯೂರಪ್ಪ – Vishwanews24

Featured, ರಾಜ್ಯ ನ್ಯೂಸ್

ಎರಡನೇ ಪಟ್ಟಿ ಇಂದೇ ಬಿಡುಗಡೆ – ಜಗದೀಶ್ ಶೆಟ್ಟರ್​ಗೆ ಪಕ್ಷ ಟಿಕೆಟ್ ಸಿಗುವುದು ಖಚಿತ : ಬಿ.ಎಸ್​​.ಯಡಿಯೂರಪ್ಪ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಪಕ್ಷ ಟಿಕೆಟ್ ಸಿಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್​​.ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್​ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆ ಅಷ್ಟೇ. ಉಳಿದ ಎಲ್ಲಾ ಕಡೆ ಒಳ್ಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಮಂಗಳವಾರ ಪ್ರಕಟಿಸಿದೆ. ಉಳಿದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಹತ್ತಾರು ಬಾರಿ ಯೋಚನೆ ಮಾಡಿಯೇ ಅಭ್ಯರ್ಥಿಗಳ ಘೋಷಣೆ ಮಾಡಲಾಗಿವುದು.ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿಗೆ ಪಕ್ಷ ಎಲ್ಲ ಸ್ಥಾನಮಾನವೂ ಕೊಟ್ಟರೂ ಈ ರೀತಿ ತೀರ್ಮಾನ ಮಾಡಿದ್ದಾರೆ. ಒಂದಿಬ್ಬರು ಬೇರೆ ಕಡೆ ಹೋಗಬಹುದು. ಆದರೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಈ ಬಾರಿ 125 – 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಿಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಬೊಮ್ಮಾಯಿ  – Vishwanews24

Leave a Reply