ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ – vishwanews24
ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ.
ಮುಖ್ಯಮಂತ್ರಿ ಹುದ್ದೆಗೆ ಇಂದು ರಾಜೀನಾಮೆ ನೀಡುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಇಂದು ಬೆಳಗ್ಗೆ ಕಾವೇರಿ ನಿವಾಸದಲ್ಲಿ ಮಂತ್ರಿಗಳ ಜೊತೆ ಉಪಹಾರ ಸಭೆಯನ್ನು ಆಯೋಜಿಸಿದ್ದರು.
ಈ ಸಭೆಯ ಆರಂಭದಲ್ಲಿ ಸಿದ್ದರಾಮಯ್ಯನವರು ಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಿಎಂ ಬಳಿಕ ಮಾತನಾಡಿದ ಡಿಕೆಶಿ, ನಾನು ಅಧ್ಯಕ್ಷನಾಗಿ ಇಲ್ಲಿವರೆಗೆ ಬಂದಿದ್ದೇನೆ. ಇದುವರೆಗೆ ನೀವೆಲ್ಲರೂ ಉತ್ತಮವಾಗಿ ಸಹಕರಿಸಿದ್ದೀರಿ. ಮುಂದೆಯೂ ಇದೇ ರೀತಿಯ ಸಹಕಾರ ನೀಡಬೇಕು ಎಂದು ಡಿಕೆಶಿ ಮನವಿ ಮಾಡಿಕೊಂಡರು.
ಇದನ್ನೂ ಓದಿ:
ಬೇರೆ ಯಾವ ವಿಚಾರವೂ ಪ್ರಸ್ತಾಪಿಸದ ಡಿಕೆಶಿ ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ ವಿನಂತಿಸಿಕೊಂಡರು. ಈ ವೇಳೆ ಡಿಕೆಶಿ ಸಿದ್ದರಾಮಯ್ಯನವರ ಆಡಳಿತವನ್ನು ಕೊಂಡಾಡಿದರು ಎಂಬ ವಿಚಾರ ತಿಳಿದುಬಂದಿದೆ
