ಎಸ್ ಸಿ ಮತ್ತು ಎಸ್ ಟಿ ಕಲ್ಯಾಣ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಎಸ್. ಅಂಗಾರ ನೇಮಕ -Vishwanews24
ಬೆಂಗಳೂರು: ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕಮಾಡಲಾಗಿದ್ದು, ಎಸ್ ಸಿ ಮತ್ತು ಎಸ್ ಟಿ ಕಲ್ಯಾಣ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಅಂಗಾರ ಅವರನ್ನು ನೇಮಕ ಮಾಡಲಾಗಿದೆ.
ಇನ್ನುಳಿದ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅರವಿಂದ ಲಿಂಬಾವಳಿ, ಹಿಂದುಳಿದ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಕುಮಾರ್ ಬಂಗಾರಪ್ಪ, ಅಧೀನ ಶಾಸನ ರಚನಾ ಸಮಿತಿಗೆ ಎಸ್.ಎ.ರಾಮದಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕಿ ಕೆ. ಪೂರ್ಣಿಮಾ, ಗ್ರಂಥಾಲಯ ಸಮಿತಿಗೆ ಎಸ್ ಆರ.ವಿಶ್ವನಾಥ್, ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಗೆ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ, ಹಕ್ಕು ಬಾಧ್ಯತೆಗಳ ಸಮಿತಿಗೆ ಎಸ್ ಎ ರವೀಂದ್ರನಾಥ್, ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿ, ಅರ್ಜಿಗಳ ಸಮಿತಿ ಮತ್ತು ವಸತಿ ಸೌಕರ್ಯ ಸಮಿತಿಗೆ ಎಂ ಕೃಷ್ಣಾ ರೆಡ್ಡಿ, ಅಂದಾಜುಗಳ ಸಮಿತಿಗೆ ಸಿ.ಎಂ ಉದಾಸಿ, ಸರ್ಕಾರಿ ಭರವಸೆಗಳ ಸಮಿತಿಗೆ ಬಸವಗೌಡ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.
