‘ಏರ್ ಪೋರ್ಟ್’ ಉದ್ಘಾಟನೆಗೆ ಕ್ಷಣಗಣನೆ : ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಶಿವಮೊಗ್ಗ  – Vishwanews24

Featured, ರಾಜ್ಯ ನ್ಯೂಸ್

‘ಏರ್ ಪೋರ್ಟ್’ ಉದ್ಘಾಟನೆಗೆ ಕ್ಷಣಗಣನೆ : ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಶಿವಮೊಗ್ಗ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಕೌಂಟ್ ಡೌನ್ ಶುರುವಾಗಿದ್ದು, ಪ್ರಧಾನಿ ಮೋದಿ ಸ್ವಾಗತಕ್ಕೆ ಶಿವಮೊಗ್ಗ ಸಜ್ಜಾಗಿದೆ.

ಹೆಲಿಕಾಪ್ಟರ್ ಮೂಲಕ ಸಿಎಂ ಬೊಮ್ಮಾಯಿ ಈಗಾಗಲೇ ಶಿವಮೊಗ್ಗ ಬಂದಿಳಿದಿದ್ದು, ಅಲ್ಲಿನ ಸಿದ್ದತೆ ವೀಕ್ಷಿಸಿದ್ದಾರೆ.ಪ್ರಧಾನಿ ಮೋದಿ ಸ್ವಾಗತಕ್ಕೆ ಸಿದ್ದತೆ ನಡೆಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ.

ಯಡಿಯೂರಪ್ಪ ಹುಟ್ಟು ಹಬ್ಬದ ದಿನವೇ ಏರ್ ಪೋರ್ಟ್ ಉದ್ಘಾಟನೆಯಾಗುತ್ತಿರುವುದು ದೈವ ಇಚ್ಚೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಬಿಎಸ್ವೈ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ, ಮಲೆನಾಡಿನ ಆರ್ಥಿಕ ಹಾಗೂ ಪ್ರವಾಸೋದ್ಯಮಕ್ಕೆ ಸಹಾಯಕವಾಗಲಿದೆ. ಇದು ಅತ್ಯಂತ ವಿಶೇಷ ಹಾಗೂ ದೈವ ಇಚ್ಚೆಯಾಗಿದ್ದು, ಬಹಳ ವಿಶೇಷವಾಗಿದೆ. ಶಿವಮೊಗ್ಗಏರ್ ಪೋರ್ಟ್ ಉದ್ಘಾಟನೆ ಒಂದು ಮೈಲಿಗಲ್ಲು ಎಂದಿದ್ದಾರೆ.

ಭಟ್ಕಳ: ನಾಲ್ವರ ಹತ್ಯೆ ಪ್ರಕರಣ; ಚಿತ್ರದುರ್ಗದಲ್ಲಿ ಪ್ರಮುಖ ಆರೋಪಿ ಪೊಲೀಸ್ ವಶಕ್ಕೆ – Vishwanews24

ಶಿವಮೊಗ್ಗ ಏರ್ಪೋರ್ಟ್ ಲೋಕಾರ್ಪಣೆ ಮರೆಯಲಾಗದ ಕ್ಷಣ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ವಿಜಯೇಂದ್ರ , ಇಡೀ ರಾಜ್ಯಾದ್ಯಂತ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ, ಶಿವಮೊಗ್ಗ ಏರ್ಪೋರ್ಟ್ ಲೋಕಾರ್ಪಣೆ ಮರೆಯಲಾಗದ ಕ್ಷಣ. ಮೋದಿ ಏರ್ಪೋರ್ಟ್ ಉದ್ಘಾಟನೆ ಮಾಡುತ್ತಿರುವುದು ನಮ್ಮ ಸೌಭಾಗ್ಯ ಎಂದು ವಿಜಯೇಂದ್ರ ಹೇಳಿದರು.

ಸುರತ್ಕಲ್:  ಮಾದಕ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ : ರಿಕ್ಷ ಚಾಲಕನಿಗೆ ಗಾಯ – Vishwanews24

Leave a Reply