ಏ.12ರಂದು ಉಡುಪಿಗೆ ಬಿ.ಎಲ್ ಸಂತೋಷ್ – ಉಚ್ಚಿಲದಲ್ಲಿ ನಡೆಯುವ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಭಾಗಿ – Vishwanews24
ಏ.12ರಂದು ಉಡುಪಿಗೆ ಬಿ.ಎಲ್ ಸಂತೋಷ್ – ಉಚ್ಚಿಲದಲ್ಲಿ ನಡೆಯುವ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಭಾಗಿ
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಏ.12ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಏ.12ರ ಬೆಳಗ್ಗೆ 10 ಕ್ಕೆ ಕಾಪು ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗ ಮಟ್ಟದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
