ಒಂದು ದೇಶ ಒಂದು ಚುನಾವಣೆ – ಇದು ಬಿಜೆಪಿಯವರ ಅಜೆಂಡಾ : ಡಿಕೆಶಿ – vishwanews24
ಒಂದು ದೇಶ ಒಂದು ಚುನಾವಣೆ – ಪ್ರಾದೇಶಿಕ ಪಕ್ಷಗಳ ಮುಗಿಸಲು ಬಿಜೆಪಿ ಪ್ಲ್ಯಾನ್ : ಡಿಕೆಶಿ ಕಿಡಿ
ವಿಜಯಪುರ: ಪ್ರಾದೇಶಿಕ ಪಕ್ಷಗಳ ಮುಗಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ, ಇದು ಬಿಜೆಪಿಯವರ ಅಜೆಂಡಾ ಎಂದು `ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ ಎನ್ನುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ವಿರೋಧವಾಗಿದೆ. ನಮ್ಮ ರಾಷ್ಟ್ರೀಯ ನಾಯಕರು ಇದನ್ನು ವಿರೋಧ ಮಾಡಿದ್ದಾರೆ ಬಿಜೆಪಿ ಈ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸಲು ಪ್ಲ್ಯಾನ್ ಹಾಕಿಕೊಂಡಿದೆ. ಇತ್ತೀಚಿಗೆ ಸಣ್ಣ ಪಕ್ಷಗಳಿಗೆ ಹೆಚ್ಚು ನಂಬರ್ಸ್ ಬರುತ್ತಿದೆ. ಹಾಗಾಗಿ ಪ್ರಾದೇಶಿಕ ಪಕ್ಷಗಳ ಮುಗಿಸಲು ಪ್ಲ್ಯಾನ್ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ಬೆಳ್ಮಣ್: ಕ್ರೈಸ್ತ ಯುವಕನ ಅಯ್ಯಪ್ಪ ಭಕ್ತಿ ; 18ನೇ ಬಾರಿ ಶಬರಿಮಲೆ ಯಾತ್ರೆ – vishwanews24
ಕೃಷ್ಣಾ ನದಿಗಾಗಿ 40,000 ಕೋಟಿ ರೂ. ಕೊಡುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ ಎರಡು ವರ್ಷ ಕಳೆದರೂ ಸರ್ಕಾರ ಬಿಡಿಗಾಸನ್ನು ಕೊಟ್ಟಿಲ್ಲ. ಜೊತೆಗೆ 5 ವರ್ಷದಲ್ಲಿ ರಾಜ್ಯಕ್ಕೆ 2 ಲಕ್ಷ ಕೋಟಿ ರೂ. ಹಾಗೂ ಅದರಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ 75 ಸಾವಿರ ಕೋಟಿ ರೂ. ಕೊಡುವುದಾಗಿ ಸರ್ಕಾರ ತಿಳಿಸಿತ್ತು. ಇದುವರೆಗೂ ಯೋಜನೆಗೆ ಬಿಡಿಗಾಸನ್ನು ಕೊಟ್ಟಿಲ್ಲ ಎಂದು ಕೇಳಿದಾಗ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ ಎಂದು ಹೇಳಿ ಜಾರಿಕೊಂಡರು.
ಉಡುಪಿ ಜಿಲ್ಲಾ ಪಂಚಾಯತ್ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ – vishwanews24
