ಕಗ್ಗಾಂಟಾದ ಅತೃಪ್ತರು ಬಿಜೆಪಿ ಸಂಪರ್ಕದಲ್ಲಿ – ಸಿಎಂ ಆಗುವುದಕ್ಕೆ ಬಿಎಸ್​ವೈ ಸಿದ್ದತೆ…!!

Featured, ರಾಜ್ಯ ನ್ಯೂಸ್

ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಅಕಾಂಕ್ಷಿಗಳು ಹೆಚ್ಚಾಗಿರುವ ಕಾರಣದಿಂದಾಗಿ ಅತೃಪ್ತರನ್ನು ಸಮಾಧಾನ ಮಾಡುವುದೇ ಕಗ್ಗಾಂಟಾಗಿ ಹೋಗಿದೆ.
ಈ ಮಧ್ಯೆ ಈ ಗೊಂದಲಮಯ ವಾತಾವರಣದಲ್ಲಿ ಸರ್ಕಾರ ಹೆಚ್ಚು ದಿನ ಇರಲಾರದು ಎಂದು ಭಾವಿಸಿರುವ ಕೆಲವು ಮುಖಂಡರು ಈಗಾಗಲೇ ಬಿಜೆಪಿ ಸಂಪರ್ಕದಲ್ಲಿ ಇದ್ದು ಅತಂತ್ರ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುವ ಬದಲು ಬಿಜೆಪಿಗೆ ಹೋಗುವುದೇ ಒಳ್ಳೆಯದು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.