ಕಡಬ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ : ಆರೋಪಿ ಜಾಮೀನು ಅರ್ಜಿ ತಿರಸ್ಕೃತ – Vishwanews24
ಕಡಬ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ : ಆರೋಪಿ ಜಾಮೀನು ಅರ್ಜಿ ತಿರಸ್ಕೃತ – Vishwanews24
ಪುತ್ತೂರು: ಅಪ್ರಾಪ್ತೆಯನ್ನು ಅತ್ಯಾಚಾರವೆಸಗಿ, ಆಕೆ ಗರ್ಭವತಿಯಾನ್ನಾಗಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿ ಶಿವರಾಜ್ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
ಏನಿದು ಪ್ರಕರಣ?
ಕಡಬ ಪೊಲೀಸ್ ಠಾಣೆಯ ಶಿವರಾಜ್ ಅದೇ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ್ದ. ಈ ಪ್ರಕರಣದಲ್ಲಿ ಆರೋಪಿ ಶಿವರಾಜ್ ನನ್ನು ಸೆ.28 ರಂದು ಪೊಲೀಸರು ಬಂಧಿಸಿದ್ದರು.
ಆರೋಪಿಯ ವಿರುದ್ದ ಬಾಲಕಿಯ ತಂದೆ ನೀಡಿದ ದೂರಿನಂತೆ ಅತ್ಯಾಚಾರ, ಸಾಕ್ಷಿ ನಾಶ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ದೋಷಾರೋಪಣ ಪಟ್ಟಿ ಕೂಡ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪರ ವಕೀಲರು ಜಾಮೀನು ಕೋರಿ ಪುತ್ತೂರಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದು ಈಗ ತಿರಸ್ಕೃತಗೊಂಡಿದೆ.
ಉಡುಪಿ : ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದಾಗಿರುವುದು ಸುಳ್ಳು ಸುದ್ದಿ : ಜಿಲ್ಲಾಧಿಕಾರಿ – Vishwanews24
