ಕಡಬ: ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ 10ನೇ ತರಗತಿ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ – Vishwanews24
ಕಡಬ: ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ 10ನೇ ತರಗತಿ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
ಕಡಬ: ಟ್ಯೂಷನ್ಗೆ ತೆರಳಿ ನಾಪತ್ತೆಯಾಗಿದ್ದ ಹತ್ತನೇ ತರಗತಿಯ ಬಾಲಕನ ಮೃತದೇಹವು ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಪತ್ತೆಯಾಗಿದೆ.
ಬುಧವಾರದಂದು ಟ್ಯೂಷನ್ಗೆಂದು ತೆರಳಿ ಆ ಬಳಿಕ ಮನೆಗೆ ಹಿಂತಿರುಗದೆ ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಂಜುನಾಥ ಶೆಟ್ಟಿ ಅವರ ಪುತ್ರ, ಕಡಬದ ಖಾಸಗಿ ಶಾಲೆಯ ಅದ್ವೈತ್ ಶೆಟ್ಟಿ (15) ಎಂಬಾತ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.
ಇನ್ನು ಮನೆಯವರು ಹಾಗೂ ಸ್ಥಳೀಯರು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ತಟದಲ್ಲಿ ನಾಕೂರು ಗಯ ಎಂಬಲ್ಲಿ ಕಂಡುಬಂದಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಡಿದಾಗ ಮೃತದೇಹವು ಪತ್ತೆಯಾಗಿದೆ.
ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ – Vishwanews24
ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ನಡೆಯಲಿದ್ದು, ಪರೀಕ್ಷೆಯ ಭಯದಿಂದ ಬಾಲಕ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
