ಕಡಬ : ದೈವ ನರ್ತನದ ವೇಳೆ ಕುಸಿದು ಬಿದ್ದು ದೈವನರ್ತಕ ನಿಧನ – Vishwanews24

ದಕ್ಷಿಣ ಕನ್ನಡ

ಕಡಬ : ದೈವ ನರ್ತನದ ವೇಳೆ ಕುಸಿದು ಬಿದ್ದು ದೈವನರ್ತಕ ನಿಧನ

ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆ

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30ರ ಮುಂಜಾನೆ ಎಡಮಂಗಲ ಗ್ರಾಮದಲ್ಲಿ ನಡೆದಿದೆ.

ಖ್ಯಾತ ದೈವ ನರ್ತಕ ಎಡಮಂಗಲ ಗ್ರಾಮದ ಕಾಂತು ಅಜಿಲ ಮೂಲಂಗೀರಿ (ಬಾಬು) (55) ಮೃತರು ಎಂದು ತಿಳಿದು ಬಂದಿದೆ.

ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೇ 10 ನವ ಕರ್ನಾಟಕಕ್ಕೆ ಹೊಸ ದಿಕ್ಸೂಚಿ ನೀಡುವ ದಿನ: ಡಿಕೆಶಿ – Vishwanews24

ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂತು ಅಜಿಲ ಮೂಲಂಗೀರಿಯವರು ಎಡಮಂಗಲ ಪರಿಸರದಲ್ಲಿ ಮತ್ತು ಇತರ ಕಡೆಗಳಲ್ಲಿಯೂ ದೊಡ್ಡ ದೊಡ್ಡ ದೈವಗಳ ನರ್ತನ ಸೇವೆಯನ್ನು ಮಾಡುತ್ತಿದ್ದರು.

Leave a Reply