ಕನ್ನಡ ರಾಜ್ಯೋತ್ಸವದಲ್ಲಿ ಕಾಂತಾರಾ ಕ್ರೇಜ್ : ಪಾಡ್ದನ ಹಾಡಿ ಗಮನ ಸೆಳೆದ ಕುಂದಾಪುರದ ನಾಗರಾಜ ಪಾಣಾರ – Vishwanews24
ಕನ್ನಡ ರಾಜ್ಯೋತ್ಸವದಲ್ಲಿ ಕಾಂತಾರಾ ಕ್ರೇಜ್ : ಪಾಡ್ದನ ಹಾಡಿ ಗಮನ ಸೆಳೆದ ನಾಗರಾಜ ಪಾಣಾರ
67 ನೇ ಕನ್ನಡ ರಾಜ್ಯೋತ್ಸವಕ್ಕೂ ಕಾಂತಾರಾ ಚಿತ್ರದ ಕ್ರೇಜ್ ಹಬ್ಬಿದೆ. ಪಾಡ್ದನದ ಹಾಡನ್ನು ಮೊದಲ ಬಾರಿಗೆ ಯಥಾವತ್ತಾಗಿ ಬೆಳ್ಳಿತೆರೆಯ ಮೇಲೆ ತಂದ ನಟ ರಿಷಬ್ ಶೆಟ್ಟಿಯ ‘ಕಾಂತಾರ’ ಚಿತ್ರದಲ್ಲಿ ಪಾಡ್ದನವನ್ನು ಹಾಡಿದ ಕುಂದಾಪುರದ ನಾಗಾರಾಜ ಪಾಣಾರ ಅವರಿಗೆ ಉಡುಪಿ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ಲಭ್ಯವಾಗಿದೆ.
ಉಡುಪಿಯಲ್ಲಿ ನಾಗಾರಾಜ ಪಾಣಾರ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ರಿ ಪ್ರಧಾನ ಮಾಡಲಾಗಿದ್ದು, ಈ ವೇಳೆ ನಾಗಾರಾಜ ಪಾಣಾರ ಕಾಂತಾರದಲ್ಲಿ ತಾವು ಹಾಡಿದ ಹೇ ಲೇಗಾ ಪದ್ಯವನ್ನು ಹಾಡಿ ಎಲ್ಲರನ್ನೂ ರಂಜಿಸಿದ್ದಾರೆ.
ಚಂದ್ರಗ್ರಹಣ ಹಿನ್ನಲೆ: ಧರ್ಮಸ್ಥಳದಲ್ಲಿ ದರ್ಶನ, ಸೇವೆಯಲ್ಲಿ ವ್ಯತ್ಯಯ – Vishwanews24
ಉಡುಪಿಯ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗಿದ್ದು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಮೀನುಗಾರಿಕಾ ಬಂದರು ಸಚಿವರಾದ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಿದ್ದಾರೆ. ಕನ್ನಡ ರಾಜ್ಯೋತ್ಸವದಲ್ಲಿ ಕಾಂತಾರ ಕಲರವ ಎದ್ದು ಕಂಡಿದ್ದು,ವಿವಿಧ ಕ್ಷೇತ್ರದಲ್ಲಿ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು,ದೈವಾರಾದಕ ನಾಗರಾಜ ಪಾಣರಿಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ‘ಕಾಂತಾರ’ ಸಿನಿಮಾದಲ್ಲಿ ಪಾಡ್ದನ ಹಾಡಿ ನಟಿಸಿದ ನಾಗರಾಜ ಪಾಣರ, ಪ್ರಶಸ್ತಿ ಬಳಿಕ ‘ಕಾಂತಾರ’ ಸಿನಿಮಾದಲ್ಲಿ ಹಾಡಿರುವ ಪಾಡ್ದನ ಹಾಗೂ ಲೇಲೇ ಗಾ ಹಾಡು ಹಾಡಿ ರಂಜಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ..ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ಬಹುಮಾನ – Vishwanews24
