ಕರಾವಳಿ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕೆಡಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24

Featured, ರಾಜ್ಯ ನ್ಯೂಸ್

ಕರಾವಳಿ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕೆಡಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24

ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ ..

ಬೆಳಗಾವಿ,: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ, ಕಾಂಗ್ರೆಸ್ ಸದಸ್ಯ ಯು ಟಿ ಖಾದರ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, “ಕರಾವಳಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೋಮು ಸಾಮರಸ್ಯ ವಾತಾವರಣವನ್ನು ಕೆಡಿಸುವ, ಕೆಲವರ, ಪ್ರಯತ್ನಗಳ ಬಗ್ಗೆ ವರದಿಗಳನ್ನು ಗಮನಿಸಿದ್ದೇನೆ, ಅವುಗಳಿಗೆ ನಿಯಂತ್ರಣ ಹೇರುವ ಬಗ್ಗೆ ಗಂಭೀರ ಪ್ರಯತ್ನ ನಡೆದಿದೆ” ಎಂದು ತಿಳಿಸಿದರು.

ಉಪ್ಪಿನಂಗಡಿ ಪಟ್ಟಣದಲ್ಲಿ ಪೊಲೀಸರ ಮೇಲೆಯೂ ಹಲ್ಲೆಯಾಗಿದೆ, ಸಾಮಾಜಿಕ ಜಾಲತಾಣ ವನ್ನು ದುರುಪಯೋಗ ಪಡಿಸಿಕೊಂಡು, ದೇಶ ವಿರೋಧಿ ಸಂದೇಶಗಳನ್ನು ಹರಿಬಿಡಲಾಗುತ್ತಿದೆ, ಎಂದ ಸಚಿವರು ಸ್ಥಳೀಯ ಪೊಲೀಸರು ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿ ಕ್ರಮ ಕೈಗೊಂಡಿದ್ದಾರೆ, ಅವರ ಪ್ರಯತ್ನ ದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದೂ ಸಚಿವರು ಹೇಳಿದರು.

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ ಐದು ಪಟ್ಟು ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ – Vishwanews24