ಕರ್ನಾಟಕ ಮಾದರಿ ತೆಲಂಗಾಣದಲ್ಲೂ ಗ್ಯಾರಂಟಿ ಬ್ರಹ್ಮಾಸ್ತ್ರ ಪ್ರಯೋಗಿಸಿದ ಕಾಂಗ್ರೆಸ್ – Vishwanews24
ಕರ್ನಾಟಕ ಮಾದರಿ ತೆಲಂಗಾಣದಲ್ಲೂ ಗ್ಯಾರಂಟಿ ಬ್ರಹ್ಮಾಸ್ತ್ರ ಪ್ರಯೋಗಿಸಿದ ಕಾಂಗ್ರೆಸ್
ಹೈದರಾಬಾದ್: ತೆಲಂಗಾಣದಲ್ಲಿ ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಅಂತ ಶಪಥ ತೊಟ್ಟಿರುವ ಕಾಂಗ್ರೆಸ್, ಕರ್ನಾಟಕ ಮಾದರಿ ಗ್ಯಾರಂಟಿ ಬ್ರಹ್ಮಾಸ್ತ್ರ ಪ್ರಯೋಗಿಸಿದೆ.
ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರ ನೋಡುವುದು ನನ್ನ ಕನಸು ಎಂದಿರುವ ಸೋನಿಯಾ ಗಾಂಧಿ, 6 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಮಹಾಲಕ್ಷ್ಮಿ ಹೆಸರಿನಲ್ಲಿ ಮಹಿಳೆಯರಿಗೆ 2,500 ಹಾಗೂ 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ಮಹಿಳೆಯರಿಗೆ ಫ್ರೀ ಬಸ್, ಕ್ವಿಂಟಾಲ್ ಭತಕ್ಕೆ 500 ಬೋನಸ್, 200 ಯೂನಿಟ್ ಫ್ರೀ ಕರೆಂಟ್, ಮನೆ ಇಲ್ಲದವರಿಗೆ ಇಂದಿರಮ್ಮ ಗೃಹ ಯೋಜನೆ ಸೇರಿದಂತೆ ಹಲವು ಭರವಸೆ ನೀಡಿದ್ದಾರೆ.
ಇದನ್ನೂ ಓದಿ:
ಬಜಪೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋ ರಿಕ್ಷಾ : ಸ್ಥಳದಲ್ಲೇ ಯುವತಿ ಸಾವು – Vishwanews24
ತುಕ್ಕುಗೂಡದ ‘ವಿಜಯಭೇರಿ’ ಸಾರ್ವಜನಿಕ ಸಭೆಯಲ್ಲಿ ಭಾನುವಾರ ತೆಲಂಗಾಣಕ್ಕೆ ಆರು ಗ್ಯಾರಂಟಿಗಳನ್ನು ಸೋನಿಯಾ ಗಾಂಧಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ತಕ್ಷಣ ಯೋಜನೆಗಳು ಜಾರಿಯಾಗಲಿವೆ ಎಂದು ಭರವಸೆ ನೀಡಿದ್ದಾರೆ.
ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ಡಿಸೆಂಬರ್ನಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ರಾಜ್ಯದಲ್ಲಿ ಗೆಲುವಿಗೆ ಕಾರಣವಾಗಿದ್ದ ಗ್ಯಾರಂಟಿಗಳ ಸೂತ್ರವನ್ನು ತೆಲಂಗಾಣದಲ್ಲೂ ಜಾರಿಗೊಳಿಸಲು ಕಾಂಗ್ರೆಸ್ ಮುಂದಾಗಿದೆ.
ಇದನ್ನೂ ಓದಿ:
ಸುರತ್ಕಲ್: ವಿಹಾರಕ್ಕೆ ಬಂದ ಮೂವರ ಪೈಕಿ ಓರ್ವ ಸಮುದ್ರಪಾಲು, ಇಬ್ಬರ ರಕ್ಷಣೆ – Vishwanews24
