ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ – vishwanews24

Featured, ರಾಜ್ಯ ನ್ಯೂಸ್

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ

ಬೆಂಗಳೂರು: ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಈ ಆದೇಶವು ಭಾರತದ ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತದಲ್ಲದೆ, ದೇಶದ ಆಂತರಿಕ ಭದ್ರತೆಗೆ ದೊಡ್ಡ ಕಂಟಕವಾಗಲಿದೆ ಎಂದು ಆರೋಪಿಸಿರುವ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24

ಭಾರತದ ಸಂವಿಧಾನವು ದೇಶದ ಎಲ್ಲಾ ನಾಗರಿಕರಿಗೂ ಒಂದೇ ಪೌರತ್ವವನ್ನು (ಏಕ ಪೌರತ್ವ) ಕಲ್ಪಿಸಿದೆ. ಆದರೆ ಕರ್ನಾಟಕ ಸರ್ಕಾರವು ಯಾವುದೇ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ ‘ಶಾಶ್ವತ ನಿವಾಸಿಗಳು’ ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಹೊರಟಿರುವುದು ಕಾನೂನುಬಾಹಿರವಾಗಿದೆ. ಇದು ಸಂವಿಧಾನದ ಸಮಾನತೆಯ ಹಕ್ಕನ್ನು ಪ್ರತಿಪಾದಿಸುವ 14ನೇ ವಿಧಿಯ ನೇರ ಉಲ್ಲಂಘನೆಯಾಗಿದೆ ಎಂದು ಅಮಿತ್ ಶಾಗೆ ಬರೆದಿರುವ ಪತ್ರದಲ್ಲಿ ಶೋಭಾ ಕರಂದ್ಲಾಜೆ ಉಲ್ಲೇಖಿಸಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಕೇವಲ ಸ್ಥಳೀಯ ಕಂದಾಯ ಅಧಿಕಾರಿಗಳ ಪರಿಶೀಲನೆ ಮತ್ತು ಸ್ಥಳೀಯ ದಾಖಲೆಗಳ ಆಧಾರದ ಮೇಲೆ ಈ ಪ್ರಮಾಣಪತ್ರವನ್ನು ನೀಡಲು ಉದ್ದೇಶಿಸಲಾಗಿದೆ. ಇದರಲ್ಲಿ ಭಾರತೀಯ ಪೌರತ್ವವನ್ನು ಕೇಂದ್ರ ಏಜೆನ್ಸಿಗಳ ಮೂಲಕ ಕಡ್ಡಾಯವಾಗಿ ಪರಿಶೀಲಿಸುವ ಯಾವುದೇ ದೃಢವಾದ ವ್ಯವಸ್ಥೆ ಇಲ್ಲ.

ಇದರಿಂದಾಗಿ ದೇಶದೊಳಗೆ ಅಕ್ರಮವಾಗಿ ನುಸುಳಿರುವ ವಿದೇಶಿ ಪ್ರಜೆಗಳು ಅಥವಾ ಅಕ್ರಮ ವಲಸಿಗರು ಸುಲಭವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಈ ‘ಶಾಶ್ವತ ವಸತಿ ಪ್ರಮಾಣಪತ್ರ’ ಪಡೆಯುವ ಅಪಾಯವಿದೆ. ಒಮ್ಮೆ ಈ ಪ್ರಮಾಣಪತ್ರ ಕೈಸೇರಿದರೆ, ಅದನ್ನು ಬಳಸಿ ಅವರು ಸರ್ಕಾರದ ಸವಲತ್ತುಗಳು, ಶೈಕ್ಷಣಿಕ ಪ್ರವೇಶಾತಿ ಹಾಗೂ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲಿದ್ದಾರೆ. ಇದು ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಹೊರಹಾಕುವ ಕೇಂದ್ರ ಸರ್ಕಾರದ ಪ್ರಯತ್ನಗಳಿಗೆ ಹಿನ್ನಡೆ ಉಂಟುಮಾಡುತ್ತದೆ ಎಂದು ಶೋಭಾ ಕರಂದ್ಲಾಜೆ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ – vishwanews24

ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಈ ಅಧಿಸೂಚನೆ ಅತ್ಯಂತ ಆತಂಕಕಾರಿಯಾಗಿದೆ. ಇದರಲ್ಲಿ ಸೂಚಿಸಲಾದ ಅರ್ಹತಾ ಮಾನದಂಡಗಳು ಪ್ರಮುಖವಾಗಿ ಕಂದಾಯ ಅಧಿಕಾರಿಗಳ ಸ್ಥಳೀಯ ಪರಿಶೀಲನೆ ಮತ್ತು ನಿವಾಸದ ಆಧಾರದ ಮೇಲಿರುವಂತೆ ಕಂಡುಬರುತ್ತವೆ.

ಆದಾಗ್ಯೂ, ಸಮರ್ಥ ಕೇಂದ್ರ ಅಧಿಕಾರಾವಳಿಗಳ ಮೂಲಕ ಭಾರತೀಯ ಪೌರತ್ವದ ಪರಿಶೀಲನೆಯನ್ನು ಕಡ್ಡಾಯಗೊಳಿಸುವ ಯಾವುದೇ ನಿಬಂಧನೆ ಅಥವಾ ಅಕ್ರಮ ವಲಸಿಗರು ಮತ್ತು ವಿದೇಶಿ ಪ್ರಜೆಗಳನ್ನು ಹೊರಗಿಡಲು ಯಾವುದೇ ಬಲವಾದ ಕಾರ್ಯವಿಧಾನ ಇರುವುದಿಲ್ಲ.

ಇದರ ಪರಿಣಾಮವಾಗಿ, ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಅಥವಾ ರಾಜ್ಯದಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿರುವ ವ್ಯಕ್ತಿಗಳು, ಸ್ಥಳೀಯ ದಾಖಲೆಗಳನ್ನು ಪ್ರಸ್ತುತಪಡಿಸುವ ಮೂಲಕ ಅಥವಾ ವಂಚನೆಯ ಮಾರ್ಗಗಳ ಮೂಲಕ ಖಾಯಂ ನಿವಾಸಿ ಪ್ರಮಾಣಪತ್ರವನ್ನು ಪಡೆಯಬಹುದು.

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

Leave a Reply