ಕಾಂಗ್ರೆಸ್ ನಾವಿಕನಿಲ್ಲದ ದೋಣಿಯಾದಂತಾಗಿದೆ : ಶೋಭಾ ಕರಂದ್ಲಾಜೆ -Vishwanews24
ಕಾಂಗ್ರೆಸ್ ನಾವಿಕನಿಲ್ಲದ ದೋಣಿಯಾದಂತಾಗಿದೆ : ಶೋಭಾ ಕರಂದ್ಲಾಜೆ -Vishwanews24
ಚಿಕ್ಕಮಗಳೂರು: “ರಾಹುಲ್ ಗಾಂಧಿ ಕಾಲಿಟ್ಟ ಪ್ರದೇಶದಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಿದೆ. ಕಾಂಗ್ರೆಸ್ ನಾಯಕರಿಗೆ ಸಾಲು ಸಾಲು ಸೋಲಿನಿಂದ ಬುದ್ದಿಭ್ರಮಣೆಯಾಗಿದ್ದು, ಹೀಗಾಗಿ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ” ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಬ್ರಿಟಿಷರನ್ನು ದೇಶ ಬಿಟ್ಟು ಓಡಿಸಿದವರಿಗೆ ನರೇಂದ್ರ ಮೋದಿಯನ್ನು ಓಡಿಸುವುದು ಕಷ್ಟಕರವಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ”ರಾಹುಲ್ ಗಾಂಧಿಗೆ ಚಿಕಿತ್ಸೆಯ ನೀಡುವ ಅಗತ್ಯವಿದೆ. ಚುನಾವಣೆಗಾಗಿ ನೀರಿಗಿಳಿಯೋದು, ಹಾಡು ಹೇಳೋದು, ಡ್ಯಾನ್ಸ್ ಮಾಡುವುದನ್ನು ನೋಡಬಹುದಾಗಿದೆ. ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಾ ಹೋಗುತ್ತಿದೆ. ಗೆಲುವು ಕಾಣದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ಸ್ಥಾನವೂ ದೊರಕಿಲ್ಲ” ಎಂದು ಟೀಕಿಸಿದ್ದಾರೆ.
”ವಂಶಾಡಳಿತ, ದುರಾಡಳಿತ, ಭ್ರಷ್ಟಾಚಾರದಿಂದ ನೀವು ಜನರಿಂದಲೇ ನಾಶವಾಗಿದ್ದೀರಾ. ಮತ್ತೆ ಸರ್ವನಾಶವಾಗುತ್ತಿರಿ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಾರೆ. ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡೋದು, ಡ್ಯಾನ್ಸ್ ಮಾಡೊದನ್ನು ನೋಡಬಹುದಾಗಿದೆ ಎಂದು ವ್ಯಂಗ್ಯವಾಡಿದರು
