ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ರದ್ದು – VIshwanews24
ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ರದ್ದು – VIshwanews24
ಬೆಂಗಳೂರು: ಕೋವಿಡ್ 19 ನಿರ್ಬಂಧ ಇದ್ದರೂ ಸರ್ಕಾರದ ನಿರ್ಧಾರಕ್ಕೆ ಸಡ್ಡು ಹೊಡೆದ ಆರಂಭಿಸಿದ್ದ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಕೊನೆಗೊಳಿಸಿದ್ದಾರೆ.
ಸರ್ಕಾರದ ಆದೇಶ ಮತ್ತು ಹೈಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಪಾದಯಾತ್ರೆಯನ್ನು ಕೊನೆಗೊಳಿಸುವ ಬಗ್ಗೆಯೇ ಹೆಚ್ಚಿನ ನಾಯಕರು ಒಲವು ವ್ಯಕ್ತಪಡಿಸಿದ್ದರಿಂದ ಇಂದಿಗೆ ಪಾದಯಾತ್ರೆ ಕೊನೆಯಾಗಿದೆ. 12 ದಿನಗಳ ಪಾದಯಾತ್ರಯನ್ನು 5 ದಿನಕ್ಕೆ ಮೊಟಕುಗೊಳಿಸಿದ್ದು, ಕೊರೊನಾ ಸೋಂಕು ಕಡಿಮೆಯಾದ ನಂತರ ರಾಮನಗರದಿಂದಲೇ ಮತ್ತೇ ಪಾದಯಾತ್ರೆಯನ್ನು ಪ್ರಾರಂಭಿಸಲು ಕಾಂಗ್ರಸ್ ನಾಯಕರು ನಿರ್ಧರಿಸಿದೆ.
