ಕಾನೂನು ಸುವ್ಯವಸ್ಥೆ ನಿರ್ವಹಿಸಲಾಗದ ಗೃಹ ಸಚಿವ ರಾಜೀನಾಮೆ ನೀಡಲಿ : ಸಿದ್ದರಾಮಯ್ಯ ಒತ್ತಾಯ – VIshwanews24
ಕಾನೂನು ಸುವ್ಯವಸ್ಥೆ ನಿರ್ವಹಿಸಲಾಗದ ಗೃಹ ಸಚಿವ ರಾಜೀನಾಮೆ ನೀಡಲಿ : ಸಿದ್ದರಾಮಯ್ಯ ಒತ್ತಾಯ – VIshwanews24
ಬೆಂಗಳೂರು: ಗೃಹ ಸಚಿವರ ಜಿಲ್ಲೆಯಲ್ಲೇ ಕೊಲೆಯಾಗಿದೆ. ಕಾನೂನು ಸುವ್ಯವಸ್ಥೆ ನಿರ್ವಹಿಸಲಾಗದ ಗೃಹ ಸಚಿವ ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಶಿವಮೊಗ್ಗ ಕೊಲೆ ಪ್ರಕರಣ ಕುರಿತು ಮಾತನಾಡಿದ ಸಿದ್ದರಾಮಯ್ಯ, ಇಂತಹ ವಿಚಾರದಲ್ಲಿ ರಾಜಕೀಯ ಮಾಡಬಾರದು. ತಪ್ಪಿತಸ್ಥರು ಯಾರೇ ಇರಲಿ ಕಠಿಣ ಶಿಕ್ಷೆ ಆಗಬೇಕು. ಇದು ಸರ್ಕಾರದ ವೈಫಲ್ಯ. ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಯುವಕನ ಕೊಲೆಯಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಯಾರದ್ದೇ ಕೊಲೆಯಾದರೂ ಕಠಿಣ ಶಿಕ್ಷೆ ಆಗಬೇಕು. ಕೊಲೆಯನ್ನು ಖಂಡಿಸುತ್ತೇವೆ. ಹರ್ಷ ಎನ್ನುವ ಯುವಕನ ಕೊಲೆಯಾಗಿದೆ. ಕಾರಿನಲ್ಲಿ ಬಂದು ಕೊಲೆ ಮಾಡಲಾಗಿದೆ ಅಂತ ನೋಡಿದೆ. ತಪ್ಪಿತಸ್ಥರು ಯಾರೇ ಇರಲಿ, ಯಾವುದೇ ಸಂಘಟನೆ ಆದರೂ, ಕಠಿಣ ಕ್ರಮ ತೆಗೆದುಕೊಳ್ಳಲಿ. ಗೃಹಸಚಿವರು ಅದೇ ಜಿಲ್ಲೆಯವರು. ಇದಕ್ಕೆ ಸರ್ಕಾರ ಜವಾಬ್ದಾರರಲ್ವಾ? ಹೋಮ್ ಮಿನಿಸ್ಟರ್ ಮತ್ತು ಈಶ್ವರಪ್ಪ ಜವಾಬ್ದಾರರಲ್ವಾ? ಇಂತಹ ವಿಚಾರದಲ್ಲಿ ಕಾಂಗ್ರೆಸ್ ಅಂತ ಹೇಳಬಾರದು. ಮೊದಲು ಅರೆಸ್ಟ್ ಮಾಡಿ. ತಪ್ಪಿತಸ್ಥರನ್ನು ಪತ್ತೆ ಮಾಡಲಿ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ :
ಉಡುಪಿ ಹಿಜಾಬ್ ವಿವಾದ : ನ್ಯಾಯಾಲಯದ ಮೊರೆ ಹೋದ ವಿದ್ಯಾರ್ಥಿನಿಯರು ಇಂದು ಪರೀಕ್ಷೆಗೆ ಗೈರು -Vishwanews24
