ಕಾಪುವಿಗೆ ಮುಖ್ಯಮಂತ್ರಿ ಆಗಮನ :- ಹೊಸ ಪ್ರಸ್ತಾವನೆ ಸದ್ಯಕ್ಕಿಲ್ಲ – ಮುಂದಿನ ದಿನ ಆಲೋಚನೆ : ಸಚಿವ ಅಂಗಾರ – Vishwanews24
ಕಾಪುವಿಗೆ ಮುಖ್ಯಮಂತ್ರಿ ಆಗಮನ :- ಹೊಸ ಪ್ರಸ್ತಾವನೆ ಸದ್ಯಕ್ಕಿಲ್ಲ – ಮುಂದಿನ ದಿನ ಆಲೋಚನೆ : ಸಚಿವ ಅಂಗಾರ
ಕಾಪು: ನವೆಂಬರ್ 7 ರಂದು ಕಾಪುವಿಗೆ ಆಗಮಿಸುವ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭಾಜಪದ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿರುವರು ಈ ಕಾರ್ಯಕ್ರಮದಲ್ಲಿ ಹತ್ತು ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ ಎಂದರು.
ಈಗಾಗಲೇ ಹತ್ತು ಹಲವಾರು ಯೋಜನೆಗಳನ್ನ ಜಾರಿಗೆ ತಂದಿರುವ ಭಾರತೀಯ ಜನತಾ ಪಾರ್ಟಿ, ಜನ ಸಂಕಲ್ಪ ಸಮಾವೇಶ ಮುಂದಿನ ಚುನಾವಣೆಗೆ ಅಡಿಗಲ್ಲು ಹಾಕಲಿದೆ ಎಂದರು.
ಕಾಪುವಿಗೆ ಹೊಸ ಯೋಜನೆಯ ಬಗ್ಗೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ ಇದೆಯೋ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ” ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಹೊಸ ಯೋಜನೆಗೆ ಪ್ರಸ್ತಾವನೆ ಸಲ್ಲಿಸುವ ಯೋಚನೆ ಇಲ್ಲ ಆದರೆ ಮುಂದಿನ ದಿನಗಳಲ್ಲಿ ಆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಆಲೋಚನೆ ಮಾಡಲಾಗುವುದು ಎಂದರು.
ಶಿರ್ವ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ – Vishwanews24
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರಧ್ಯಕ್ಷ ಶ್ರೀಕಾಂತ್ ನಾಯಕ್,ಸದಾನಂದ, ಶಿಲ್ಪಾಜಿ ಸುವರ್ಣ, ಗಂಗಾಧರ ಸುವರ್ಣ ಗೋಪಾಲಕೃಷ್ಣರಾವ್ ಮೊದಲಾದವರು ಉಪಸ್ಥಿತರಿದ್ದರು
