ಕಾಪು: ಕೊರಗ ಸಮುದಾಯದ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ – vishwanews24
ಕಾಪು: ಕೊರಗ ಸಮುದಾಯದ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ
ಕಾಪು: ರಾಜೀವ ಗಾಂಧಿ ವಸತಿ ನಿಗಮದಿಂದ ಕೊರಗ ಸಮುದಾಯದ 10 ಫಲಾನುಭವಿಗಳಿಗೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ
ಮಂಜೂರಾದ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರವನ್ನು ಇಂದು ವಿತರಿಸಲಾಯಿತು. ಕಾವು ಶಾಸಕ ಗುರ್ಮ ಸುರೇಶ್ ಶೆಟ್ಟಿ ಅವರು ತಮ್ಮ ಹಿರಿಯಡಕ ಶಾಸಕರ ಕಚೇರಿಯಲ್ಲಿ ಮಂಜೂರಾತಿ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬೊಮ್ಮರಬೆಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತಿ, ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸಂದೀಪ ಹಾಗೂ ಪ್ರಮುಖರು ಉಪಸ್ಮಿತರಿದ್ದರು.
