ಕಾಪು – ಬಿಪರ್ಜಾಯ್ ಚಂಡ ಮಾರುತ : ಮೂಳೂರು ತೊಟ್ಟಂ ಪರಿಸರದಲ್ಲಿ ತೀವ್ರಗೊಂಡ ಕಡಲ್ಕೊರೆತ – Vishwanews24
ಬಿಪರ್ಜಾಯ್ ಚಂಡ ಮಾರುತ – ಮೂಳೂರು ತೊಟ್ಟಂ ಪರಿಸರದಲ್ಲಿ ತೀವ್ರಗೊಂಡ ಕಡಲ್ಕೊರೆತ
ಕಡಲ್ಕೊರೆತ ತೀವ್ರಗೊಳ್ಳುತ್ತಿದ್ದು ಹೆಚ್ಚಿನ ಹಾನಿಯುಂಟಾಗುತ್ತಿದೆ : ಸ್ಥಳೀಯರ ಆಕ್ರೋಶ
ತುರ್ತಾಗಿ ತಾತ್ಕಾಲಿಕ ತಡೆಗೋಡೆ ನಿರ್ಮಿಸುವುದಾಗಿ ಜಿಲ್ಲಾಧಿಕಾರಿ ಭರವಸೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಲತಾ ಎಸ್. ಪೂಜಾರಿ, ರತ್ನಾ ಪೂಜಾರಿ, ಲೀಲಾ ಪೂಜಾರಿ, ಮಹಾಲಿಂಗ ಪೂಜಾರಿ, ದಿನೇಶ್ ಪೂಜಾರಿ, ನಳಿನಾಕ್ಷಿ ಪೂಜಾರಿ ಅವರ ಮನೆ ಸಮೀಪ ಕೊರೆತ ತೀವ್ರಗೊಂಡಿದ್ದು 2 ತೆಂಗಿನ ಮರಗಳು ಮತ್ತು ಹಿಂದೆ ಹಾಕಿದ್ದ ತಡೆಗೋಡೆಯ ಬೃಹತ್ ಬಂಡೆಗಳು ಸಮುದ್ರಕ್ಕೆ ಆಹುತಿಯಾಗಿವೆ. ಇನ್ನಷ್ಟು ತೆಂಗಿನ ಮರಗಳು ಸಮುದ್ರ ಪಾಲಾಗುವ ಭೀತಿ ಇದೆ. ಕಾಪು ಕಂದಾಯ ಅಧಿಕಾರಿ ಲೋಕನಾಥ್ ಲಮಾಣಿ ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲಿಸಿದ್ದು ಜಿಲ್ಲಾಡಳಿತ, ತಾಲೂಕು ಆಡಳಿತಕ್ಕೆ ನಷ್ಟದ ಬಗ್ಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.
ಉಡುಪಿ ಡ್ರಗ್ಸ್ ಪ್ರಕರಣ : ಮಣಿಪಾಲದಲ್ಲಿ ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್ ಗಳ ಬಂಧನ – Vishwanews24
ಸ್ಥಳೀಯರ ಆಕ್ರೋಶ: ಇಲ್ಲಿ ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ತೀವ್ರಗೊಳ್ಳುತ್ತಿದ್ದು ಹೆಚ್ಚಿನ ಹಾನಿಯುಂಟಾಗುತ್ತಿದೆ. ಕಳೆದ ವರ್ಷ ಸಂಸದರು, ಕೇಂದ್ರ-ರಾಜ್ಯ ಸಚಿವರು, ಶಾಸಕರು, ವಿಪಕ್ಷ ನಾಯಕರು, ಮಾಜಿ ಸಿಎಂ ಸಹಿತ ಹಲವರು ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಅದರಂತೆ ಕಾಮಗಾರಿ ಆರಂಭಿಸಿದ್ದು ಕೆಲವೆಡೆ ಕಾಮಗಾರಿಗಾಗಿ ಹಾಕಿರುವ ಕಲ್ಲುಗಳೇ ಸಮುದ್ರ ಪಾಲಾಗಿವೆ. ಒಂದೆಡೆ ಕಾಮಗಾರಿ ನಡೆಯುತ್ತಿದ್ದರೆ ಮತ್ತೂಂದೆಡೆ ಕಲ್ಲುಗಳು ಸಮುದ್ರ ಪಾಲಾಗುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುರ್ತು ಕಾಮಗಾರಿ
ಕಡಲ್ಕೊರೆತ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿರುವ ದಿಶಾ ಸಭೆಯಲ್ಲಿ ಜಿಲ್ಲಾಡಳಿತ ಮತ್ತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಅಗತ್ಯವಿರುವಲ್ಲಿ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಅನುದಾನ ಬಳಸಿಕೊಂಡು ತುರ್ತಾಗಿ ತಾತ್ಕಾಲಿಕ ತಡೆಗೋಡೆ ನಿರ್ಮಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಗೃಹ ಲಕ್ಷ್ಮಿ ಯೋಜನೆ – ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಾರಂಭ : ಲಕ್ಷ್ಮೀ ಹೆಬ್ಬಾಳ್ಕರ್ – Vishwanews24
