ಕಾಪು ಮಹತೋಭಾರ ಶ್ರಿ ಲಕ್ಷ್ಮೀ ಜನಾರ್ದನ ದೇವಸ್ಥಾನ ವಾರ್ಷಿಕ ಮಹೋತ್ಸವ : ವೈಭವದ ಶ್ರೀ ಮನ್ಮಹಾರಥೋತ್ಸವ – Vishwanews24 https://www.vishwanews24.com/?p=55313
ಕಾಪು ಮಹತೋಭಾರ ಶ್ರಿ ಲಕ್ಷ್ಮೀ ಜನಾರ್ದನ ದೇವಸ್ಥಾನ ವಾರ್ಷಿಕ ಮಹೋತ್ಸವ : ವೈಭವದ ಶ್ರೀ ಮನ್ಮಹಾರಥೋತ್ಸವ – Vishwanews24
ಕಾಪು ಮಹತೋಭಾರ ಶ್ರಿ ಲಕ್ಷ್ಮೀ ಜನಾರ್ದನ ದೇವಸ್ಥಾನದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಶುಕ್ರವಾರ ವೈಭವದ ಶ್ರೀ ಮನ್ಮಹಾರಥೋತ್ಸವ ನೆರವೇರಿತು.
ದೇವಸ್ಥಾನದ ಪ್ರಧಾನ ತಂತ್ರಿಗಳಾದ ಶ್ರೀಶ ತಂತ್ರಿಯವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ನಾರಾಯಣ ತಂತ್ರಿ ಮತ್ತು ವೈದಿಕ ವೃಂದದವರು ನಾನಾ ಧಾರ್ಮಿಕ ಅನುಷ್ಠಾನಗಳನ್ನು ನೆರವೇರಿಸಿದರು. ಬೆಳಗ್ಗೆ 10.30ರ ಮೇಷ ಲಗ್ನದಲ್ಲಿ ರಥಾರೋಹಣ ನಡೆಯಿತು. ಬಳಿಕ ಮಧ್ಯಾಹ್ನ ನಡೆದ ಸಾರ್ವಜನಿಕ ಮಹಾ ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಅನ್ನ ಪ್ರಸಾದ ಸ್ವೀಕರಿಸಿದರು.




ದೇವಸ್ಥಾನದ ಗೌರವ ಸಲಹೆಗಾರ ಕೆ.ಪಿ. ಆಚಾರ್ಯ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮೋಹನ್ ಎಂ. ಬಂಗೇರ, ಸಮಿತಿಯ ಮಾಜಿ ಸದಸ್ಯರು ಮತ್ತು ಕಾರ್ಯ ನಿರ್ವಹಣಾಧಿಕಾರಿ ಸುಧೀರ್ ಶೆಟ್ಟಿ, ಶ್ರೀಕರ್ ಶೆಟ್ಟಿ ಕಲ್ಯ,ಕಟ್ಟಡ ನವೀಕರಣ ಸಮಿತಿಯ ಅಧ್ಯಕ್ಷ ಶಶಿಧರ ಶೆಟ್ಟಿ ಎರ್ಮಾಳ್, ಸ್ವರ್ಣ ಕವಚ ಪ್ರಭಾವಳಿ ಸಮರ್ಪಣಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ್ ಶೆಟ್ಟಿ, ಶಾಸಕ ಲಾಲಾಜಿ ಆರ್ ಮೆಂಡನ್, ಪ್ರಮುಖರಾದ ಉದ್ಯಮಿ ಮನೋಹರ್ ಎಸ್ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ, ಸಚ್ಚಿದಾನಂದ ಶೆಟ್ಟಿ, ಅನಿಲ್ ಬಲ್ಲಾಳ್, ಕಾಪು ದಿವಾಕರ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಯೋಗೀಶ್ ವಿ.ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ಮಾಧವ ಆರ್. ಪಾಲನ್, ಶ್ರೀಧರ ಶೆಣೈ, ಪ್ರಸಾದ್ ಶೆಣೈ, ಸಂದೀಪ್ ಶೆಟ್ಟಿ ಕಲ್ಯಾ,ರತ್ನಾಕರ ಶೆಟ್ಟಿ,ಅನಿಲ್ ಕುಮಾರ್,ಕಿರಣ್ ಆಳ್ವಾ , ದೇವಳದ ಸಿಬಂದಿ ವರ್ಗ, ಕಾಪು ಸಾವಿರ ಸೀಮೆಯ ಹತ್ತುಸಮಸ್ತರು ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.









