ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ ; ಬಾಲಕಿ ಸಾವು -vishwanews24
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ – ಬಾಲಕಿ ಸಾವು
ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಕೊನೆಯುಸಿರೆಳೆದಿದ್ದಾರೆ.
ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ ಪ್ರವೇಶಾತಿಯನ್ನೂ ಮುಗಿಸಿದ್ದರು. ಮರುದಿನ ಆಕೆಯ ತಂದೆ ನಿತ್ಯಾನಂದ ಶೆಟ್ಟಿ ಅವರು ಮಾತ್ರ ದುಬಾಯಿಗೆ ತೆರಳುವರಿದ್ದು, ಕಾಪು ಪೇಟೆಗೆ ಏನನ್ನೋ ತರಲು ಹೋಗಿ ವಾಪಾಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪಘಾತದ ತಾಣಕ್ಕೂ ಅವರ ಪೂವಣಿಗುತ್ತು ಮನೆಗೂ ಕೇವಲ ಅರ್ಧ ಕಿ.ಮೀ. ದೂರವಷ್ಟೇ ಬಾಕಿ ಇತ್ತು. ಆದ್ರೆ, ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಖಾಸಗಿ ಬಸ್ಸು ಸ್ಕೂಟಿಗೆ ಡಿಕ್ಕಿ ಹೊಡೆದು ತಂದೆಯೊಂದಿಗೆ ಬಂದಿದ್ದ ಬಾಲಕಿ ಸಾತ್ವಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
