ಕಾರ್ಕಳ: ಆಗುಂಬೆ ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು – Vishwanews24

Featured, ಉಡುಪಿ

ಕಾರ್ಕಳ: ಆಗುಂಬೆ ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

ಕಾರ್ಕಳ: ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸಿವಿಲ್‌ ಎಂಜಿನಿಯರಿಂಗ್‌ ಮುಗಿಸಿ ಕಂಟ್ರಾಕ್ಟರ್‌ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಸಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್‌ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹೆಬ್ರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು.

ಉಡುಪಿ: 40 ಅಡಿ ಆಳದ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ ಪೇಜಾವರ ಶ್ರೀಗಳು – Vishwanews24

ಇನ್ನು ಶಶಾಂಕ್‌ ಸಹಿತ ಒಂದೇ ಕುಟುಂಬದ 6 ಮಂದಿ ಮೂರು ಬೈಕ್‌ನಲ್ಲಿ ಭಾನುವಾರ ಬೆಳಗ್ಗೆ ಹೊರಟಿದ್ದರು. ಶಶಾಂಕ್‌ ಅವರ ಜತೆ ಹಿಂಬದಿ ಸವಾರರಾಗಿ ಅಕ್ಕನ ಮಗಳು ನಿರ್ಮಿತಾ ಕುಳಿತಿದ್ದರು. ಅವರು ದ್ವಿತೀಯ ಪಿಯುಸಿ ಮುಗಿಸಿ ಪದವಿ ಕಾಲೇಜಿಗೆ ಸೇರಿದ್ದರು ಎಂದು ತಿಳಿದು ಬಂದಿದೆ.

 

Leave a Reply