ಕಾರ್ಕಳ : ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಮೋದ್ ಮುತಾಲಿಕ್ – Vishwanews24
ಕಾರ್ಕಳ : ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಮೋದ್ ಮುತಾಲಿಕ್ – Vishwanews24
ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣ ಕಣಕ್ಕಿಳಿದಿರುವ ಪ್ರಮೋದ್ ಮುತಾಲಿಕ್ ಏ. 18 ರಂದು ತಾಲೂಕು ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಪ್ರಮೋದ್ ಮುತಾಲಿಕ್ ಜೀ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್ ಅಧಿಕಾರಿ, ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಪ್ರಧಾನ ಸಂಚಾಲಕ ವಿವೇಕಾನಂದ ಶೆಣೈ, ಸಂಘಟನಾ ಕಾರ್ಯದರ್ಶಿ ರಾಜೇಶ್ ನಾಯಕ್, ಸಂಚಾಲಕ ಸುರೇಶ್ ಶೆಟ್ಟಿ, ಲಕ್ಷ್ಮೀ ನಾರಾಯಣ ಮಲ್ಯ ಮೊದಲಾದವರು ಉಪಸ್ಥಿತರಿದ್ದರು.
