ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ – vishwanews24

Featured, ಉಡುಪಿ

ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ

ಕಾರ್ಕಳ : ಅಜೆಕಾರು ಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯ ಇಂದು ಆದೇಶ ನೀಡಿದೆ.

ಬಂಧಿತ ಪ್ರತಿಮಾಳನ್ನು ಪೊಲೀಸರು ಅ.25ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ.7ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವೇಳೆ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್ ಹೆಗ್ಡೆಯನ್ನು ಪೊಲೀಸರು ಅ.28ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಮಲ್ಪೆ ಬೀಚ್ ನಲ್ಲಿ ಮತ್ತೆ ಆರಂಭಗೊಂಡ ಫ್ಲೋಟಿಂಗ್ ಬ್ರಿಡ್ಜ್ : ಪ್ರವಾಸಿಗರಿಂದ ಉತ್ತಮ ಸ್ಪಂದನೆ – vishwanews24

ಇವರಿಬ್ಬರ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಬಿಗಿ ಭದ್ರತೆಯಲ್ಲಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶ ನೀಡಿದರು.

ಮಧುಮೇಹ ಹೊಂದಿರುವವರು ಗಿಲ್ಟ್ ಇಲ್ಲದೆ ಯಾವುದೇ ಹಬ್ಬದಲ್ಲಿ ಪಾಲ್ಗೊಳ್ಳಲು ಕೆಲವು ಸಲಹೆಗಳು – vishwanews24

Leave a Reply