ಕಾರ್ಕಳ  : ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ;  ಬೈಕ್ ಸವಾರ ಸಾವು… vishwanews24

Featured, ಉಡುಪಿ

ಕಾರ್ಕಳ  : ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ;  ಬೈಕ್ ಸವಾರ ಸಾವು…

ಕಾರ್ಕಳ : ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ.

ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್ (20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಯರ್ಲಪಾಡಿ – ಗೋವಿಂದೂರು ಕಡೆಯಿಂದ ಬರುತ್ತಿದ್ದ ಬಸ್‌ಗೆ ಬೈಲೂರು ಹೈಸ್ಕೂಲ್‌ ಸಾಗುವ ತಿರುವಿನಲ್ಲಿ ಕಾರ್ಕಳದೆಡೆಗೆ ಸಾಗುವ ಬೈಕ್‌ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಸವಾರ ಮೃತಪಟ್ಟಿದ್ದಾರೆ. ಸಹ ಸವಾರನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ – vishwanews24

Leave a Reply