ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿ ಆತ್ಮಹತ್ಯೆ – Vishwanews24
ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿ ಆತ್ಮಹತ್ಯೆ
ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಮಾ.28ರಂದು ನಡೆದಿದೆ.
ರತ್ನಾವತಿ ನಾಯಕ್ (85) ಆತ್ಮಹತ್ಯೆ ಮಾಡಿಕೊಂಡವರು.
ಇವರ ಕಿರಿಯ ಮಗ ಮಾ.26 ರಂದು ಸಂಜೆ ವೇಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೇ ನೋವಿನಿಂದ ರತ್ನಾವತಿ ನಾಯಕ್ ಅವರು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಿರಿಮಗ ಚಂದ್ರಶೇಖರ್ ನಾಯಕ್ ನೀಡಿದ ದೂರಿನಂತೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,.
ಮಂಗಳೂರು : ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ – Vishwanews24
