ಕಾರ್ಕಳ: ಮನೆಗಳ್ಳತನ ಪ್ರಕರಣ; ಆರೋಪಿ ಬಂಧನ – vishwanews24

Featured, ಉಡುಪಿ

ಕಾರ್ಕಳ: ಮನೆಗಳ್ಳತನ ಪ್ರಕರಣ; ಆರೋಪಿ ಬಂಧನ

ಕಾರ್ಕಳ: ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿ ಆ.30ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳ ನಿವಾಸಿ ಸಂತೋಷ್ ಟಿ(32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಮನೆಯ ಮಲಗುವ ಕೋಣೆಯಲ್ಲಿದ್ದ ಗೋದ್ರೇಜ್ ಲಾಕರ್‌ನಿಂದ 10.05 ಲಕ್ಷ ಮೌಲ್ಯದ 33 ಪವನ್ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣ; ಅರುಣ್ ಕುಮಾರ್ ಪುತ್ತಿಲಗೆ ಜಾಮೀನು ಮಂಜೂರು – vishwanews24

ಆರೋಪಿಯನ್ನು ಬಂಧಿಸಲು ಪಿಎಸ್‌ಐ ದಿಲೀಪ, ಪಿಎಸ್‌ಐ ಸುಂದರ, ಪಿಸಿಗಳಾದ ಮಹಾಂತೇಶ, ಪ್ರಶಾಂತ್ ಕೆ, ಶಶಿಕುಮಾರ್, ನಾಗರಾಜ, ಗೋವಿಂದ ಆಚಾರಿ, ರಾಘವೇಂದ್ರ, ಅಶೋಕ್ ಅವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.

ಸೆಪ್ಟೆಂಬರ್ 1 ರಂದು ಆರೋಪಿ ಸಂತೋಷ್ ಎಂಬಾತನನ್ನು ಬಂಧಿಸಿದ ತಂಡವು ದ್ವಿಚಕ್ರವಾಹನವನ್ನು ಜಪ್ತಿ ಮಾಡುವುದರೊಂದಿಗೆ ಕಳವು ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ.

ಕಾರವಾರ:  ಕಾಳಿ ಸೇತುವೆ ತಡೆಗೋಡೆ ಮೇಲೆ ಕಬ್ಬಿಣದ ದೊಡ್ಡ ಪೈಪ್ ಗಳಿಂದ ಎತ್ತರಕ್ಕೆ ಮಾಡಲು ಜಿಲ್ಲಾಧಿಕಾರಿಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರ ಮನವಿ – vishwanews24

Leave a Reply