ಕಾರ್ಕಳ :  ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ : ಕಾರ್ಯಕರ್ತರಿಗೆ  ಸುನಿಲ್ ಕುಮಾರ್ ಕರೆ – vishwanews24

Featured, ಉಡುಪಿ

ಕಾರ್ಕಳ :  ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ : ಕಾರ್ಯಕರ್ತರಿಗೆ  ಸುನಿಲ್ ಕುಮಾರ್ ಕರೆ

ಕಾರ್ಕಳ : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ಉಡುಪಿ ಜಿಲ್ಲೆಯ ಕಾರ್ಕಳದ ಶಾಸಕರ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು.

ಈ ವೇಳೆ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಮಾತನಾಡಿ, ಡಾ ಧನಂಜಯ ಸರ್ಜಿಯವರು ವೈದ್ಯರಾಗಿ ಶಿವಮೊಗ್ಗದಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಕ್ರಿಯಾಶೀಲ ವ್ಯಕ್ತಿ. ಇನ್ನು ಶಿಕ್ಷಕರ ಕ್ಷೇತ್ರದಿಂದ ಎಸ್. ಎಲ್. ಭೋಜೇಗೌಡರು ಸ್ಪರ್ಧಿಸುತ್ತಿದ್ದಾರೆ, ಇಬ್ಬರು ಅಭ್ಯರ್ಥಿಗಳ ಗೆಲುವಿಗೆ ಪ್ರತಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ಉಡುಪಿ: ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್‌ ತಲುಪಿಲ್ಲ, ತಲುಪಿದ ಕೂಡಲೇ ಉತ್ತರಿಸುವೆ : ರಘುಪತಿ ಭಟ್‌ – vishwanews24

ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈ ಭಾರಿ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೆತ್ರದಿಂದ ಎನ್ ಡಿ ಎ ಅಭ್ಯರ್ಥಿಯಾಗಿ ಎಸ್. ಎಲ್ ಭೋಜೇಗೌಡರು ಸ್ಪರ್ಧಿಸುತ್ತಿದ್ದಾರೆ. ಇವರ ಗೆಲುವಿಗೆ ವಾರ್ಡ್, ಬೂತ್ ಗಳಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಡಾ ಧನಂಜಯ ಸರ್ಜಿ , ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಬೋಜೆಗೌಡ, ವಿಭಾಗ ಪ್ರಭಾರಿಗಳಾದ ಉದಯ ಕೆಲ್ ಶೆಟ್ಟಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಯೋಗೀಶ್ , ದೇಶಪಾಲ ಶೆಟ್ಟಿ , ಮುನಿರಾಜ ಶೆಟ್ಟಿ , ಜಿಲ್ಲಾ ಕಾರ್ಯದರ್ಶಿಗಳಾದ ಉದಯ ಕಠಾರೆ , ಮಹಾವೀರ ಹೆಗಡೆ , ರೇಷ್ಮಾ ಉದಯ ಶೆಟ್ಟಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ಮಂಗಳೂರು: ಭಾರೀ ಮಳೆಗೆ ರಾಜಕಾಲುವೆಗೆ ಉರುಳಿ ಬಿದ್ದ ಆಟೋ : ಚಾಲಕ ಸಾವು – vishwanews24

Leave a Reply