ಕಾಶ್ಮೀರ ಸಮಸ್ಯೆಗಳಿಗೆ ನೆಹರು ಅವರೇ ಕಾರಣ : ಅಮಿತ್ ಶಾ -Vishwanews24
ನವದೆಹಲಿ : ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ವಿರುದ್ಧ ಗೃಹ ಸಚಿವ ಅಮಿತ್ ಶಾ ವಾಗ್ಧಾಳಿ ನಡೆಸಿದ್ದಾರೆ. ಕಾಶ್ಮೀರದ ದೀರ್ಘಕಾಲದ ಸಮಸ್ಯೆಗಳಿಗೆ ನೆಹರು ಅವರೇ ಕಾರಣ ಎಂದು ಅಮಿತ್ ಶಾ ವಾಗ್ಧಾಳಿ ನಡೆಸಿದ್ದಾರೆ.
ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಶ್ಮೀರವನ್ನು ಒಟ್ಟಾಗಿ ಕೊಂಡೊಯ್ಯುವ ವಿಚಾರದ ನಿರ್ಧಾರವನ್ನು ಯಾರ ಜೊತೆಯೂ ಚರ್ಚಿಸದೇ ಜವಾಹರ್ ಲಾಲ್ ನೆಹರು ಅವರು ವೈಯಕ್ತಿಕವಾಗಿ ತೆಗೆದುಕೊಂಡು ಹೋದರು, ಈ ತಪ್ಪು ಹಿಮಾಲಯಕ್ಕಿಂತ ದೊಡ್ಡದಾಗಿದೆ ಎಂದು ಕಿಡಿಕಾರಿದರು.
ದೇಶದ ಹಿಂದಿನ ಕಾಂಗ್ರೆಸ್ ಸರ್ಕಾರ ಇತಿಹಾಸವನ್ನು ವಿರೂಪಗೊಳಿಸಿದೆ. 1947 ರಿಂದ ಈ ವರೆಗೆ ಜಮ್ಮು ಕಾಶ್ಮೀರ ನಮಗೆ ಚರ್ಚೆಯ ಹಾಗೂ ವಿವಾದದ ವಿಷಯವಾಗಿತ್ತು, ಈ ಇತಿಹಾಸವನ್ನು ಸಾರ್ವಜನಿಕರಿಗೆ ತಿಳಿಸಲಾಗಿದೆ. ಸರಿಯಾದ ಇತಿಹಾಸವನ್ನು ಜನರಿಗೆ ತಿಳಿಸುವ ಕಾಲ ಈಗ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದರು.
