ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ – vishwanews24

Featured, ಉಡುಪಿ

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ

ಕುಂದಾಪುರ: ಇಲ್ಲಿನ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಕುಂದಾಪುರ ಪೊಲೀಸರು ಜುಲೈ 18ರಂದು ಬಂಧಿಸಿದ್ದಾರೆ.

ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಬಂಧಿತ ಆರೋಪಿಗಳು.

ಬ್ರಹ್ಮಾವರ : ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ ಸರಿಗೆ, 34 ಕೆಜಿ ತೂಕದ ತಾಮ್ರದ ಸರಿಗೆ, 64 ಕೆಜಿ ತೂಕದ ಹಿತ್ತಾಳೆಯ ವಸ್ತು, 20 ಕೆಜಿ ತೂಕದ ಅಲ್ಯೂಮಿನಿಯಂ ವಸ್ತು, ಫ್ರಿಡ್ಜ್ ಕಂಪ್ರಸರ್, 45 ಹಳೆಯ ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಕುಂದಾಪುರ ನಗರ ಠಾಣಾ ಎಸ್‌ಐಗಳಾದ ನಂಜಾ ನಾಯ್ಕ, ಪುಷ್ಪಾ, ಸಂಚಾರ ಎಸ್‌ಐ ನೂತನ್, ಸಿಬ್ಬಂದಿಗಳಾದ ಮೋಹನ್, ಸಂತೋಷ್, ಪ್ರಿನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್, ಸತೀಶ್ ಭಾಗವಹಿಸಿದ್ದರು.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಐದು ದಿನ ಭಾರೀ ಮಳೆ ; ಪ್ರವಾಸಿಗರಿಗೆ ಎಚ್ಚರಿಕೆ – vishwanews24

Leave a Reply