ಕುಂದಾಪುರ: ಅಪರಿಚಿತನಿಂದ ವ್ಯಕ್ತಿಗೆ ಚೂರಿ ಇರಿತ – ಪ್ರಕರಣ ದಾಖಲು – Vishwanews24

Featured, ಉಡುಪಿ

ಕುಂದಾಪುರ: ಅಪರಿಚಿತನಿಂದ ವ್ಯಕ್ತಿಗೆ ಚೂರಿ ಇರಿತ – ಪ್ರಕರಣ ದಾಖಲು

ಕುಂದಾಪುರ: ಅಪರಿಚಿತನೊಬ್ಬ ಕಾರಿನಲ್ಲಿ ಬಂದು ಚೂರಿ ಇರಿದು ಪರಾರಿಯಾದ ಘಟನೆ ರವಿವಾರ ಸಂಜೆ ಕುಂದಾಪುರದ ಚಿಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ನಡೆದಿದೆ.

ಚೂರಿ ಇರಿತಕ್ಕೊಳಗಾದವರನ್ನು ಕುಂದಾಪುರ ಮೂಲದ ರಾಘವೇಂದ್ರ (42) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ರಾಘವೇಂದ್ರ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿ ರಾಘವೇಂದ್ರ ಅವರ ಕಾರನ್ನು ಅಡ್ಡಗಟ್ಟಿ ತೊಡೆಗೆ ಚೂರಿ ಇರಿದು, ಕಾರಿನಲ್ಲಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ವೃತ್ತ ನಿರೀಕ್ಷಕ ನಂದ ಕುಮಾರ್, ಕುಂದಾಪುರ ನಗರ ಠಾಣೆ ಪಿಎಸೈ ವಿನಯ್ ಕೊರ್ಲಹಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಂದಾಪುರ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ

Leave a Reply