ಕುಂದಾಪುರ : ಪ್ರೇಯಸಿಗೆ ಚೂರಿ ಇರಿದು ಆತ್ಮಹತ್ಯೆಗೆ ಶರಣಾದ ಯುವಕ – VIshwanews24
ಕುಂದಾಪುರ : ಪ್ರೇಯಸಿಗೆ ಚೂರಿ ಇರಿದು ಆತ್ಮಹತ್ಯೆಗೆ ಶರಣಾದ ಯುವಕ – VIshwanews24
ಕುಂದಾಪುರ : ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಯುವತಿಗೆ ಚೂರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್ (35) ಎಂದು ಗುರುತಿಸಲಾಗಿದೆ.
ಈತ ಸ್ಥಳೀಯ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು, ಆ ಪ್ರೇಮ ವೈಫಲ್ಯಗೊಂಡಿದ್ದರಿಂದ ಮನನೊಂದಿದ್ದನು. ಬುಧವಾರ ಸಂಜೆ ಶಿರಿಯಾರ ಯುವತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಬಳಿಕ ಹಾರ್ಯಾಡಿ ಬಳಿಯ ಮನೆಗೆ ತೆರಳಿ ತಾನೂ ನೇಣಿಗೆ ಶರಣಾಗಿದ್ದಾನೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ : ಸ್ಪಷ್ಟ ಬಹುಮತದೊಂದಿಗೆ ಕೋಟೆಕಾರು ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡ ಬಿಜೆಪಿ – Vishwanews24
