ಕುಂದಾಪುರ: ಬಸ್ ಡಿಕ್ಕಿ – ಪಾದಾಚಾರಿ ಮಹಿಳೆ ಸ್ಥಳದಲ್ಲಿಯೇ ಸಾವು – Vishwanews24
ಕುಂದಾಪುರ: ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ ; ಮಹಿಳೆ ಸ್ಥಳದಲ್ಲಿಯೇ ಸಾವು
ಕುಂದಾಪುರ : ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಕಿರೀಮಂಜೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಬೈಂದೂರು ಪೊಲೀಸರು, ಹೈವೆ ಪೊಲೀಸ್, ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ,. ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್, ಬೈಂದೂರು ಪೊಲೀಸ್ ಅಧಿಕಾರಿ ಮಹೇಶ್ ಮೊದಲಾದವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಫೇಲ್ ಆದ SSLC ವಿದ್ಯಾರ್ಥಿಗಳ ಗಮನಕ್ಕೆ : ಮರು ಪರೀಕ್ಷೆ ದಿನಾಂಕ ಪ್ರಕಟ , ವೇಳಾಪಟ್ಟಿ ಹೀಗಿದೆ – Vishwanews24
ಘಟನಾ ಸ್ಥಳಕ್ಕೆ ಆಗಮಿಸಿದ ಬೈಂದೂರು ನ್ಯಾಷನಲ್ ಆಂಬ್ಯುಲೆನ್ಸ್ ಪ್ರವೀಣ್ ಆಚಾರಿ, ನತರ್ ನಾಗೂರು, 24×7 ಇಬ್ರಾಹಿಂ ಗಂಗೊಳ್ಳಿ, ಸಮೀರ್ ಕಿರಿಮಂಜೇಶ್ವರ ಜೊತೆಗೂಡಿ ಶವವನ್ನು ಗೌರವಯುತವಾಗಿ ಪ್ಯಾಕ್ ಮಾಡಿ ನ್ಯಾಷನಲ್ ಆಂಬ್ಯುಲೆನ್ಸ್ ಮೂಲಕ ಬೈಂದೂರಿನ ಶವಾಗಾರಕ್ಕೆ ಕಳುಹಿಸಿಕೊಟ್ಟರು.
