ಕುಂದಾಪುರ: ‘ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣ ನಿಷ್ಪಕ್ಷಪಾತ ತನಿಖೆ : ಸಚಿವ ಕೋಟ – Vishwanews24
ಕುಂದಾಪುರ: ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣ ನಿಷ್ಪಕ್ಷಪಾತ ತನಿಖೆ : ಸಚಿವ ಕೋಟ – Vishwanews24
ಕುಂದಾಪುರ: ಯಡಮೊಗೆ ಉದಯ ಗಾಣಿಗ ಪ್ರಕರಣ ನಿಷ್ಪಕ್ಷಪಾತ ತನಿಖೆ ನಡೆಯುತ್ತದೆ. ಕಾನೂನಿನ ವಿಚಾರದಲ್ಲಿ ಸರ್ಕಾರವಾಗಲಿ, ಶಾಸಕರಾಗಲಿ, ಸಂಸದರಾಗಲಿ ನಾವ್ಯಾರು ಮಧ್ಯ ಪ್ರವೇಶ ಮಾಡಿಲ್ಲ, ಮಾಡುವುದೂ ಇಲ್ಲ. ಕಾನೂನು ತನ್ನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಚಿತ್ತೂರಿನಲ್ಲಿ ಅವರು ಮಾಧ್ಯಮದವರು ಕೇಳಲಾದ ಉದಯ ಗಾಣಿಗ ಕೊಲೆಯ ಕುರಿತಾದ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಇಲ್ಲ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಪಕ್ಷದ ಮುಖಂಡರೇ ಈಗಾಗಲೇ ಸ್ಪಷ್ಟ ಪಡಿಸಿದ್ದಾರೆ. ಬಿಜೆಪಿ ರಾಜ್ಯಧ್ಯಕ್ಷರಾದ ಪರಮೋಚ್ಛ ಹುದ್ದೆಯಲ್ಲಿರುವಲ್ಲಿ ನಳಿನ್ ಕುಮಾರ್ ಕಟೀಲು ಅವರೇ ಯಾವುದೇ ಗೊಂದಲವಿಲ್ಲ ಎಂದು ಹೇಳಿದ್ದಾರೆ. ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಯಡಿಯೂರಪ್ಪನವರ ಸರ್ಕಾರದ ಗುರಿ ಎಂದರೆ ಕೊರೋನಾ ಮುಕ್ತ ಕರ್ನಾಟಕವನ್ನು ಮಾಡುವುದು. ಆ ಹಿನ್ನೆಲೆಯಲ್ಲಿ ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.
