ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಮೆಟ್ಟಿಲಿನವರೆಗೂ ನೀರು – vishwanews24
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ದರ್ಪಣ ತೀರ್ಥ ಹೊಳೆ ಉಕ್ಕಿ ಹರಿದಿದೆ.
ಸತತ ಮಳೆಯ ಪರಿಣಾಮ ದರ್ಪಣ ತೀರ್ಥ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ಪ್ರವಾಹದ ನೀರು ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದೆ.
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ – vishwanews24
ಹೊಳೆ ನೀರು ಕ್ಷೇತ್ರದ ವ್ಯಾಪ್ತಿಗೆ ನುಗ್ಗಿದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಭಕ್ತರು ಸಂಚರಿಸಲು ಹಾಗೂ ದರ್ಶನ ಪಡೆಯಲು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಭಾರೀ ಮಳೆಯಿಂದಾಗಿ ಸ್ಥಳೀಯವಾಗಿ ಕೆಲವೆಡೆ ಅವಾಂತರದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಆದರೆ ಬುಧವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಸದ್ಯ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸತತ ಮಳೆಯ ಹಿನ್ನೆಲೆಯಲ್ಲಿ ಏರಿಕೆಯಾಗಿದ್ದ ದರ್ಪಣ ತೀರ್ಥ ನದಿಯ ನೀರಿನ ಮಟ್ಟವೂ ಗಣನೀಯವಾಗಿ ಇಳಿಕೆಯಾಗಿದೆ.
ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಸದ್ಯ ಪರಿಸ್ಥಿತಿ ಸುಧಾರಿಸುತ್ತಿದ್ದು, ಭಕ್ತರು ಹಾಗೂ ಸ್ಥಳೀಯರಲ್ಲಿ ನೆಮ್ಮದಿ ಮೂಡಿದೆ.
