ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ – ಮುಸ್ಲಿಂ ವ್ಯಾಪಾರ ಬಹಿಷ್ಕಾರ : ಎಲ್ಲಾ ಮುಸ್ಲಿಮರನ್ನು ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ :-ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ – Vishwanews24

Featured, ರಾಜ್ಯ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ – ಮುಸ್ಲಿಂ ವ್ಯಾಪಾರ ಬಹಿಷ್ಕಾರ : ಮುಸ್ಲಿಮರನ್ನೆಲ್ಲಾ ಕೊಂದು ಹಿಂದೂ ರಾಷ್ಟ್ರ ಮಾಡಿ :-ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ

ಬೆಂಗಳೂರು: ಎಲ್ಲಾ ಮುಸ್ಲಿಮರನ್ನು ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ ವ್ಯಕ್ತಪಡಿಸಿದರು.

ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿಯಲ್ಲಿ ಮುಸ್ಲಿಂ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಮಾತನಾಡಿದ ಅವರು, ಮುಸ್ಲಿಂ ಧರ್ಮದ ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಯಾವೊಬ್ಬ ಮುಸ್ಲಿಮರು ಅವರ ಪರವಾಗಿ ನಿಲ್ಲುವುದಿಲ್ಲ. ಬೇರೆ ಧರ್ಮಗಳಲ್ಲಿ ತಪ್ಪು ಮಾಡಿದವರ ಪರವಾಗಿ ನಿಲ್ಲುವುದನ್ನು ನಾವು ನೋಡಿದ್ದೇವೆ. ಮುಸ್ಲಿಂ ಮಹಿಳೆ ಮೇಲೆ ರೇಪ್ ಮಾಡಿದ 12 ಜನರು ಜೈಲಿಂದ ಹೊರಗಡೆ ಬಂದಾಗ ಸ್ವಾಗತ ಮಾಡಿದ್ದಾರೆ. ಮುಸ್ಲಿಂ ಅವರನ್ನು ಕೊಂದು ಜೈಲಿಂದ ಹೊರಗಡೆ ಬಂದವರನ್ನ ರಾಜಾತಿಥ್ಯ ನೀಡಿ, ರಾಜಕೀಯ ವ್ಯಕ್ತಿಯಾಗಿ ಬೆಳೆಸಿದ್ದಾರೆ ಎಂದು ಕಿಡಿಕಾರಿದರು.

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬೈಕ 🏍️ ಸವಾರ ಸಾವು – Vishwanews24

ಮುಸ್ಲಿಂ ಸಮುದಾಯದಲ್ಲಿ ಒಂದು ತಪ್ಪು ಮಾಡ್ತೇವೆ. ತಪ್ಪು ನಡೆದಾಗ ಮೌನವಾಗಿ ಇರುತ್ತೇವೆ. ಮುಸ್ಲಿಂ ವ್ಯಾಪಾರ ವಿರೋಧ ಮಾಡ್ತೀರಾ ಅಂದ್ರೆ, ಮುಸ್ಲಿಂ ರಾಷ್ಟ್ರಗಳಿಂದ ನೀವು ಯಾವುದನ್ನು ಖರೀದಿ ಮಾಡಬೇಡಿ ಎಂದ ಅವರು, ಒಂದು ಸಮಾಜ ಶಾಂತಿ ಇರಬೇಕು ಅಂದರೆ ಎಲ್ಲಾ ಜಾತಿಯರು ಚೆನ್ನಾಗಿರಬೇಕು. ಅದು ಅವಶ್ಯಕತೆ ಹಾಗೂ ಅನಿವಾರ್ಯತೆ ಕೂಡವಾಗಿದೆ. ಇಲ್ಲಾಂದ್ರೆ ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಕಿಡಿಕಾರಿದರು.

ಮುಸ್ಲಿಂ ವ್ಯಾಪಾರ ಬಹಿಷ್ಕಾರ : ರಾಜ್ಯದ ಕರಾವಳಿಯಲ್ಲಿ ಕಳೆದ ವರ್ಷ ಶುರುವಾಗಿದ್ದ ಧರ್ಮ ದಂಗಲ್ ಮತ್ತೆ ಸದ್ದು ಮಾಡ್ತಿದೆ. ಇಷ್ಟು ದಿನ ತಣ್ಣಗಿದ್ದ ಧರ್ಮದ ವಿಚಾರಗಳು ಇದೀಗ ಬಾಂಬ್ ಸ್ಫೋಟದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿಯ ಕುಕ್ಕೆ ಸುಬ್ರಹ್ಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ

kukke subramanya

ಬೆಳ್ತಂಗಡಿ : ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತ : ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24

Leave a Reply