ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ – vishwanews24

Featured, ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ : ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ 

ಸುಬ್ರಹ್ಮಣ್ಯ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು.

ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತಾಯ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು.

ದ.ಕ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜು- vishwanews24

ಬೆಳ್ಳಿಗ್ಗೆ ದೇವಾಲಯಕ್ಕೆ ಬಂದ ಯಡಿಯೂರಪ್ಪ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಮಾಜಿ ಸಚಿವ ಅಂಗಾರ, ಮೋಹನ್ ರಾಮ ಸುಳ್ಳಿ ಹಾಗೂ ದೇವಳ ಸಮಿತಿಯವರು ಇದ್ದರು.

ಮಧ್ಯಾಹ್ನ ಸುಳ್ಯಕ್ಕೆ ತೆರಳುವ ಯಡಿಯೂರಪ್ಪ, ಸುಳ್ಯದ ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.

Leave a Reply