ಕೃಷಿಮಸೂದೆ ಹೋರಾಟದಲ್ಲಿ ಭಾಗಿಯಾಗುತ್ತಿರುವ ರಾಜಕೀಯ ಪಕ್ಷಗಳು ಡೋಂಗಿಗಳು- ಶೋಭಾ ಕರಂದ್ಲಾಜೆ.vishwanews24

Featured, ಉಡುಪಿ

ಕೃಷಿಮಸೂದೆ ಹೋರಾಟದಲ್ಲಿ ಭಾಗಿಯಾಗುತ್ತಿರುವ ರಾಜಕೀಯ ಪಕ್ಷಗಳು ಡೋಂಗಿಗಳು- ಶೋಭಾ ಕರಂದ್ಲಾಜೆ

ಉಡುಪಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿಮಸೂದೆಯ ವಿರುದ್ಧ ರಾಜಕೀಯ ಪಕ್ಷಗಳು ಸೇರಿ ಹೋರಾಟ ಮಾಡುತ್ತಿರುವವರು ಡೋಂಗಿಗಳು‌ ಮತ್ತು ಇವರ ಇಬ್ಬಗೆಯ ನೀತಿ ತೋರಿಸುತ್ತಿದೆ ಎಂದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದರು.

ಕೇಂದ್ರ ಸರ್ಕಾರ ಈ ಮಸೂದೆಯನ್ನು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಜತೆ ಚರ್ಚಿಸಿ ಪಾಸ್ ಮಾಡಲಾಗಿದೆ ಈಗ ಇವರುಗಳು ಡ್ರಾಮ ಮಾಡುತ್ತಿದ್ದಾರೆ.ರೈತರನ್ನು ಮುಂದೆ ತೋರಿಸಿ ಉಳಿದ ರಾಜಕೀಯ ಪಕ್ಷಗಳು ಬಿಜೆಪಿ ಯನ್ನು ವಿರೋಧಿಸುವ ದೃಷ್ಟಿಯಿಂದ ಈ ಮಸೂದೆಯನ್ನು ವಿರೋಧ ಮಾಡುತ್ತಿದ್ದಾರೆ ಎಂದರು.
APMC ಯಲ್ಲಿ ಮಧ್ಯವರ್ತಿ ಹಾವಳಿ ತಪ್ಪಿಸಿ ನೇರವಾಗಿ ಕೃಷಿಕರಿಗೆ ಲಾಭ ಮಾಡುವ ಉದ್ದೇಶದಿಂದ ಈ ಮಸೂದೆ ಪಾಸ್ ಆಗಿದೆ. ತುಕುಡೆ ಗ್ಯಾಂಗ್ ನ ವ್ಯವಸ್ಥಿತ ಷಡ್ಯಂತ್ರಕ್ಕೆ ರೈತರು ಬಲಿಯಾಗಬಾರದು, ಹಿಂದೆ ಶರತ್ ಪವರ್ ಕೇಂದ್ರದ ಕೃಷಿ ಸಚಿವರಾಗಿದ್ದಾಗ ಕೂಡ ಈ ಮಸೂದೆಯ ಬಗ್ಗೆ ಎಲ್ಲಾ ರಾಜ್ಯಕ್ಕೆ ಪತ್ರ ಬರೆದಿದ್ದರು ಎಂದರು.ರೈತರ ಹೆಸರಿನಲ್ಲಿ ಜೆ.ಎನ್.ಯು ವಿದ್ಯಾರ್ಥಿಗಳು ಕೂಡ ರಸ್ತೆಗೆ ಬಂದು ಪ್ರತಿಭಟನೆ ಮಾಡುತ್ತಿರುವುದು ಹಾಸ್ಯಸ್ಪದ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ಪ್ರ.ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ,ಶಾಸಕ‌ ರಘಪತಿ ಭಟ್,ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಮಹಿಳಾಮೋರ್ಚ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ,ಜಿಲ್ಲಾ ವಕ್ತಾರ ಗುರುಪ್ರಸಾದ್ ಮೊದಲಾದವರು ಉಪಸ್ಥಿತಿತರಿದ್ದರು.

ಬ್ಯುರೋ ರಿಪೋರ್ಟ್- ವಿಶ್ವನ್ಯೂಸ್24