ಕೆಎಸ್ಆರ್ ಬೆಂಗಳೂರು- ಕಾರವಾರ ನಡುವಿನ ಪಂಚಗಂಗಾ ಎಕ್ಸ್ಪ್ರೆಸ್ಗೆ ತಾತ್ಕಾಲಿಕ ಹೆಚ್ಚುವರಿ ಬೋಗಿ – vishwanews24
ಕೆಎಸ್ಆರ್ ಬೆಂಗಳೂರು- ಕಾರವಾರ ನಡುವಿನ ಪಂಚಗಂಗಾ ಎಕ್ಸ್ಪ್ರೆಸ್ಗೆ ತಾತ್ಕಾಲಿಕ ಹೆಚ್ಚುವರಿ ಬೋಗಿ
ಉಡುಪಿ: ಕೆಎಸ್ಆರ್ ಬೆಂಗಳೂರು- ಕಾರವಾರ- ಕೆಎಸ್ಆರ್ ಕಾರವಾರ ನಡುವೆ ಸಂಚರಿಸುವ ಪಂಚಗಂಗಾ ಎಕ್ಸ್ಪ್ರೆಸ್ ರೈಲಿಗೆ ಜನರ ಬೇಡಿಕೆ ಹೆಚ್ಚಿರುವುದರಿಂದ ತಾತ್ಕಾಲಿಕ ನೆಲೆಯಲ್ಲಿ ಹೆಚ್ಚುವರಿ ಬೋಗಿಗಳನ್ನು ಅಳವಡಿ ಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಈ ವ್ಯವಸ್ಥೆ ಮಾರ್ಚ್ 2ರಿಂದ ಎಪ್ರಿಲ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಸದ್ಯ 14 ಎಲ್ಎಚ್ಬಿ ಕೋಚ್ಗಳೊಂದಿಗೆ ಸಂಚರಿಸುವ ಈ ರೈಲಿಗೆ ಮಾ.2ರಿಂದ ಐದು ಹೆಚ್ಚುವರಿ ಕೋಚ್ಗಳನ್ನು ಸೇರ್ಪಡೆಗೊಳಿಸಲಾಗುತ್ತದೆ. ಇದು ಮುಂದಿನ ಎಪ್ರಿಲ್ 16ರವರೆಗೆ ಇರುತ್ತದೆ. ಇವುಗಳಲ್ಲಿ ಒಂದು ಫಸ್ಟ್ ಕ್ಲಾಸ್ ಎಸಿ ಒಂದು, 3 ಟಯರ್ ಎಸಿ ಇಕಾನಮಿ ಕೋಚ್ ಒಂದು, ಸ್ಲೀಪರ್ ಕೋಚ್ ಒಂದು ಹಾಗೂ ಜನರಲ್ 3 ಕೋಚ್ಗಳಿರುತ್ತವೆ.
ಇದನ್ನೂ ಓದಿ : 👇
ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣ ; ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ : ಪರಮೇಶ್ವರ್ – vishwanews24
