ಕೊರೊನಾ ಅಬ್ಬರ : ಕೇರಳ-ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ `RT-PCR’ ನೆಗೆಟಿವ್ ವರದಿ ಕಡ್ಡಾಯ -Vishwanews24

Featured, ರಾಜ್ಯ ನ್ಯೂಸ್

ಕೊರೊನಾ ಅಬ್ಬರ : ಕೇರಳ-ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ `RT-PCR’ ನೆಗೆಟಿವ್ ವರದಿ ಕಡ್ಡಾಯ -Vishwanews24

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಹೀಗಾಗಿ ಕೊರೊನಾ ಸೋಂಕು ಹೆಚ್ಚಾಗಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ತಕ್ಷಣದಿಂದ ಆರ್ ಟಿಪಿಸಿಆರ್ ವರದಿ ಕಡ್ಡಾಯ ಮಾಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಪಾಲಿಕೆ ಆಯುಕ್ತ ಗೌರವ್ ಗುಪ್ತ ಅವರು, ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ಆರ್ ಟಿಪಿಸಿಆರ್ ವರದಿ ಕಡ್ಡಾಯ ಮಾಡಲಾಗಿದೆ. ಕೋವಿಡ್ 19 ಪರೀಕ್ಷೆ ವರದಿ ಇಲ್ಲದೆ ಬೆಂಗಳೂರಿಗೆ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿಯೇ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುಉವುದು. ನೆಗೆಟಿವ್ ವರದಿ ಕೈ ಸೇರುವವರೆಗೂ ಅವರು ಮನೆಯಲ್ಲಿಯೇ ಕ್ವಾರಂಟೈನ್ ಇರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.