ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಕೋವಿಡ್ ಲಸಿಕಾ ಉತ್ಸವಕ್ಕೆ ಸಕಲ ಸಿದ್ಧತೆ : ಸುಧಾಕರ್ -Vishwanews24
ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಕೋವಿಡ್ ಲಸಿಕಾ ಉತ್ಸವಕ್ಕೆ ಸಕಲ ಸಿದ್ಧತೆ : ಸುಧಾಕರ್ -Vishwanews24
ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ನಾಳೆಯಿಂದ (ಏಪ್ರಿಲ್ 11 ರಿಂದ 14 ರವರೆಗೆ) 4 ದಿನಗಳ ಕೋವಿಡ್ ಲಸಿಕಾ ಉತ್ಸವ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಏಪ್ರಿಲ್ 11 ರಂದು ಜ್ಯೋತಿ ಬಾ ಪುಲೆ ಜನ್ಮದಿನ ಹಾಗೂ ಏಪ್ರಿಲ್ 14 ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆಯವರೆಗೂ ರಾಜ್ಯದಲ್ಲಿ ಕೋವಿಡ್ ಲಸಿಕಾ ಉತ್ಸವ ಜರುಗಲಿದೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದ 8 ನಗರಗಳಲ್ಲಿ ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಏಪ್ರಿಲ್ 20 ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ರಾತ್ರಿ ಹೇರಿರುವ ಕರ್ಪ್ಯೂ ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು : ಸಿದ್ದರಾಮಯ್ಯ -Vishwanews24
