ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

Featured, ಉಡುಪಿ

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ

ಕೊಲ್ಲೂರು: ಮೇ 17ರ ಮಧ್ಯಾಹ್ನ ಕೊಲ್ಲೂರು ದಳಿ ಎಂಬಲ್ಲಿ ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ನಡುವೆ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಮೃತರಾಗಿ ಹಲವರು ಗಾಯಗೊಂಡಿದ್ದು ಮೃತ ಮಹಿಳೆಯ ಚಿನ್ನಾಭರಣಕ್ಕೆ ಕನ್ನ ಹಾಕಿದ ಘಟನೆ ವರದಿಯಾಗಿದೆ.

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಮೃತರ ಸಂಬಂಧಿಕರು ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಇದನ್ನೂ ಓದಿ:

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಕಳೆದ ರವಿವಾರ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತರಾಗಿ ಮಕ್ಕಳು ಸಹಿತ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಕೇರಳ ಮೂಲದ ಜ್ಯೋತಿ ಹಾಗೂ ಆರಿಯಾ ಅನುಪ್ ಎನ್ನುವರು ಮೃತಪಟ್ಟಿದ್ದರು. ಅಪಘಾತದ ತೀವೃತೆಯ ಸಂದರ್ಭದಲ್ಲಿ ಮೃತ ಮಹಿಳೆ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಖದೀಮರು ಚಾಣಾಕ್ಷತನದಿಂದ ಕಳವು ಮಾಡಿದ್ದರು.

ಮೃತ ಜ್ಯೋತಿ ಕುಟುಂಬಸ್ಥರು ಈ ಶೋಕದಿಂದ ಚೇತರಿಸಿಕೊಂಡ ಬಳಿಕ ಒಡವೆಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮವಹಿಸಿದ್ದಾರೆ.

ಇದನ್ನೂ ಓದಿ:

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

Leave a Reply