ಕೋಟಾ ಶ್ರೀನಿವಾಸ ಪೂಜಾರಿಗೆ ಚುನಾವಣಾ ಖರ್ಚಿಗೆ 25 ಸಾವಿರ ರೂ. ನೀಡಿದ ಚುರುಮುರಿ ವ್ಯಾಪಾರಿ – Vishwanews24
ಕೋಟಾ ಶ್ರೀನಿವಾಸ ಪೂಜಾರಿಗೆ ಚುನಾವಣಾ ಖರ್ಚಿಗೆ 25 ಸಾವಿರ ರೂ. ನೀಡಿದ ಚುರುಮುರಿ ವ್ಯಾಪಾರಿ
ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿಇಂದು ಬೆಳಗ್ಗೆಯಿಂದ ಚಿಕ್ಕಮಗಳೂರು ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಪ್ರಚಾರಕ್ಕೆಂದು ಹೋದಾಗ ಚಿಕ್ಕಮಗಳೂರು ಹೊರವಲಯದ ತೇಗೂರು ಸರ್ಕಲ್ ನಲ್ಲಿನ ಚುರುಮುರಿ ವ್ಯಾಪಾರಿ ಲೊಕೇಶ್ ಬಾಬು ಅವರು ಕೋಟಾಗೆ 25 ಸಾವಿರ ಹಣವನ್ನ ಚುನಾವಣಾ ಖರ್ಚಿಗಾಗಿ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ. ಹಣದ ಜೊತೆ ಎಲೆ-ಅಡಿಕೆ-ಬಾಳೆಹಣ್ಣು ಸೇರಿ ವಿವಿಧ ಹಣ್ಣುಗಳನ್ನ ನೀಡಿ ಚುನಾವಣೆಗೆ ಶುಭಕೋರಿದ್ದಾರೆ.
ಕಳೆದ 25 ವರ್ಷಗಳಿಂದ ತೇಗೂರು ಸರ್ಕಲ್ ನಲ್ಲಿ ಚುರುಮುರಿ ಅಂಗಡಿ ಇಟ್ಟಿರುವ ಲೊಕೇಶ್ ಬಿಜೆಪಿಯ ಅಪ್ಪಟ ಕಾರ್ಯಕರ್ತ. ಇಂದು ಕೋಟಾ ಪ್ರತಿಯೊಂದು ಅಂಗಡಿಗಳಿಗೆ ಹೋಗಿ ಮತಯಾಚನೆ ಮಾಡುವ ವೇಳೆ ಹಣ ನೀಡಿ ಶುಭಕೋರಿದ್ದಾರೆ.
5,8,9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ – Vishwanews24
